Webdunia - Bharat's app for daily news and videos

Install App

ಹಬ್ಬದ ಮೊದಲೇ ಏರಿದ ತರಕಾರಿ ಬೆಲೆ

Webdunia
ಶನಿವಾರ, 9 ಅಕ್ಟೋಬರ್ 2021 (19:47 IST)
ಬೀದರ್ : ಬಹುತೇಕ ಜನರು ದಸಾ ಹಬ್ಬದ ಸಂಭ್ರಮದಲ್ಲಿದ್ದಾರೆ. ಕೆಲವರು ಉಪವಾಸ ವ್ರತಾಚರಣೆಯಲ್ಲಿ ತೊಡಗಿದ್ದಾರೆ. ದೇವಿ ಮಂದಿರಗಳಲ್ಲಿ ವಿಶೇಷ ಪೂಜೆ ಹಾಗೂ ಭಜನೆಗಳು ನಡೆದಿವೆ.

ವರುಣದೇವ ಅಬ್ಬರಿಸಿ ತೋಟಗಾರಿಕೆ ಬೆಳೆಗಳಿಗೆ ನಷ್ಟ ಉಂಟು ಮಾಡಿದ್ದಾನೆ. ಹೀಗಾಗಿ ಮಾರುಕಟ್ಟೆಯಲ್ಲಿ ಸಹಜವಾಗಿ ತರಕಾರಿಗಳ ಬೆಲೆಗಳಲ್ಲಿ ಹೆಚ್ಚಳ ಆಗಿದೆ.
ಅಡುಗೆ ರುಚಿ ಹೆಚ್ಚಿಸುವ ಟೊಮೆಟೊ ಬೆಲೆ ಪ್ರತಿ ಕ್ವಿಂಟಲ್ಗೆ ₹ 6 ಸಾವಿರ ಹಾಗೂ ಬೀನ್ಸ್ ₹ 2 ಸಾವಿರ ಹೆಚ್ಚಾಗಿದೆ. ಹಸಿ ಮೆಣಸಿನಕಾಯಿ, ಈರುಳ್ಳಿ, ಬೆಳ್ಳುಳ್ಳಿ ಸಹ ಖಾಟು ಹೆಚ್ಚಿಸಿಕೊಂಡಿವೆ. ತರಕಾರಿ ರಾಜ ಬದನೆಕಾಯಿ ಮಾರುಕಟ್ಟೆಯಲ್ಲಿ ಮತ್ತೆ ಘನತೆ ಹೆಚ್ಚಿಸಿಕೊಂಡಿದ್ದಾನೆ.
ಟೊಮೆಟೊ ಬೆಲೆಯಲ್ಲಿ ಪ್ರತಿ ಕ್ವಿಂಟಲ್ಗೆ ₹ 6 ಸಾವಿರ, ಬೀನ್ಸ್ ₹ 3 ಸಾವಿರ, ಗಜ್ಜರಿ ₹ 2 ಸಾವಿರ, ಬೀಟ್ರೂಟ್ ₹ 1,500 ಮೆಣಸಿನಕಾಯಿ, ನುಗ್ಗೆಕಾಯಿ, ಬದನೆಕಾಯಿ ₹ 1 ಸಾವಿರ, ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ, ಹಿರೇಕಾಯಿ, ಬೆಂಡೆಕಾಯಿ, ಹೂಕೋಸು, ಕೊತಂಬರಿ ಬೆಲೆ ₹ 500 ಹೆಚ್ಚಳವಾಗಿದೆ.
ವರುಣದೇವನ ಅವಕೃಪೆಗೆ ಒಳಗಾಗಿ ಮದುಡಿಕೊಂಡ ಎಲೆಕೋಸು ಹಾಗೂ ಸಬ್ಬಸಗಿ ಬೆಲೆ ಕುಸಿದಿದೆ, ತೊಂಡೆಕಾಯಿ, ಮೆಂತೆ ಸೊಪ್ಪು, ಕರಿಬೇವು ಹಾಗೂ ಪಾಲಕ್ ಬೆಲೆ ಮಾತ್ರ ಸ್ಥಿರವಾಗಿದೆ.
ಅತಿವೃಷ್ಟಿಯಿಂದ ತರಕಾರಿ ಹಾಳಾಗಿದೆ. ಹೆಚ್ಚು ತರಕಾರಿ ಮಾರುಕಟ್ಟೆ ಬಂದಿಲ್ಲ. ಸದ್ಯ ನವರಾತ್ರಿ ಇರುವ ಕಾರಣ ಬೆಲೆ ಹೆಚ್ಚಳವಾಗಿದೆ ಎಂದು ತರಕಾರಿ ವ್ಯಾಪಾರಿ ವಿಜಯಕುಮಾರ ಹೇಳುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments