Webdunia - Bharat's app for daily news and videos

Install App

ಪ್ರವಾಸಿ ವೀಸಾ ನಿಯಮ ಉಲ್ಲಂಘನೆ !

Webdunia
ಶನಿವಾರ, 24 ಸೆಪ್ಟಂಬರ್ 2022 (15:42 IST)
ದಿಸ್ಪುರ್ : ಪ್ರವಾಸಿ ವೀಸಾ ನಿಯಮ ಉಲ್ಲಂಘಿಸಿ, ಅನುಮತಿ ಪಡೆಯದೇ ಧಾರ್ಮಿಕ ಬೋಧನೆ ನಡೆಸುತ್ತಿದ್ದ ಆರೋಪದ ಮೇಲೆ 17 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಅಸ್ಸಾಂನ ಬಿಸ್ವನಾಥ್ ಚರಿಯಾಲಿ ಜಿಲ್ಲೆಯಲ್ಲಿ ಬಂಧಿಸಲಾಗಿದೆ.

ಬಿಸ್ವನಾಥ್ ಜಿಲ್ಲೆಯ ಗಿಂಗಿಯಾ ಪ್ರದೇಶದ ದೂರದ ಬಾಗ್ಮರಿ ಪ್ರದೇಶದಲ್ಲಿ ಅವರನ್ನು ಬಂಧಿಸಲಾಗಿದೆ. ಅಸ್ಸಾಂಗೆ ಬರುವ ಮೊದಲು ಅವರು ರಾಜಸ್ಥಾನದ ಅಜ್ಮೀರ್ ಷರೀಫ್ ಮತ್ತು ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯ ಸ್ಥಳಗಳಿಗೆ ಭೇಟಿ ನೀಡಿದ್ದರು ಎಂದು ಡಿಜಿಪಿ ಭಾಸ್ಕರ್ ಜ್ಯೋತಿ ಮಹಾಂತ ತಿಳಿಸಿದ್ದಾರೆ. 

ಇದಕ್ಕೂ ಮುನ್ನ ಐದು ಜನರ ಬಾಂಗ್ಲಾದೇಶಿಗರ ತಂಡ ಕಳೆದ ಆಗಸ್ಟ್ 28ರಂದು ಅಸ್ಸಾಂನ ದಕ್ಷಿಣ ಸಲ್ಮಾರ ಮಂಕಚಾರ್ ಜಿಲ್ಲೆಯ ಮೂಲಕ ಅಕ್ರಮವಾಗಿ ಗಡಿ ಪ್ರವೇಶಿಸಿತ್ತು. ಐವರನ್ನೂ ಬಿಎಸ್ಎಫ್ ಬಂಧಿಸಿತ್ತು. 

ಅದಾದ ಬಳಿಕ ಪ್ರವಾಸಿ ನಿಯಮ ಉಲ್ಲಂಘಿಸಿ 17 ಮಂದಿ ಅಸ್ಸಾಂ ಪ್ರವೇಶಿಸಿದ್ದಾರೆ. ಬಾಗ್ಮರಿ ಪ್ರದೇಶದಲ್ಲಿ ಯಾವುದೇ ಪ್ರವಾಸಿ ಆಕರ್ಷಣೆ ಇಲ್ಲ. ಆದರೂ ಈ ವಿದೇಶಿಗರು ಏಕೆ ಇಲ್ಲಿಗೆ ಬಂದಿದ್ದಾರೆ ಎನ್ನುವ ರಹಸ್ಯ ಹುಡುಕಿ ಹೊರಟಾಗ ಅವರು ಧಾರ್ಮಿಕ ಉಪದೇಶ ಮತ್ತು ಧಾರ್ಮಿಕ ಚಟುವಟಿಕೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.

ವಿವಿಧ ದಿನಾಂಕಗಳಲ್ಲಿ ತಂಡೋಪತಂಡವಾಗಿ ಅಸ್ಸಾಂಗೆ ಪ್ರವೇಶಿಸಿದ್ದಾರೆ ಎಂಬುದನ್ನು ಖಚಿತಪಡಿಸಿಕೊಂಡ ನಂತರ ಅವರನ್ನು ಬಂಧಿಸಲಾಗಿದೆ ಎಂದು ಭಾಸ್ಕರ್ ಜ್ಯೋತಿ ಮಹಾಂತ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments