Webdunia - Bharat's app for daily news and videos

Install App

ಯುದ್ಧ : ಭಾರೀ ಏರಿಕೆ ಕಂಡ ಕಚ್ಚಾತೈಲ !

Webdunia
ಸೋಮವಾರ, 7 ಮಾರ್ಚ್ 2022 (11:07 IST)
ಲಂಡನ್ : ಉಕ್ರೇನ್ ಮತ್ತು ರಷ್ಯಾ ಯುದ್ಧದಿಂದಾಗಿ ಬ್ರೆಂಟ್ ಕಚ್ಚಾ ತೈಲದ ಬೆಲೆ ದಿನೇ ದಿನೇ ಏರಿಕೆಯಾಗುತ್ತಿದೆ.
 
ಸೋಮವಾರ 1 ಬ್ಯಾರಲ್ಗೆ 130 ಡಾಲರ್ (10,006 ರೂ.) ಆಗಿದ್ದು, ಇದೇ ಮೊದಲ ಬಾರಿಗೆ ಕಳೆದ 14 ವರ್ಷಗಳಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ. ಈಗಾಗಲೇ ರಷ್ಯಾ, ಉಕ್ರೇನ್ ಯುದ್ಧ ಜಾಗತೀಕ ಮಟ್ಟದಲ್ಲಿ ಸಾಕಷ್ಟು ಪರಿಣಾಮ ಬೀರುತ್ತಿದೆ. ಜೊತೆಗೆ ವಿಶ್ವ ಮಟ್ಟದಲ್ಲಿ ಕಚ್ಚಾ ತೈಲ ಪೂರೈಕೆ ಮೇಲೆ ಅಗಾಧ ಪರಿಣಾಮ ಬೀರಿದ್ದು, ದರ ಶೇ.7 ರಷ್ಟು ಅಧಿಕ ಏರಿಕೆಯಾಗಿದೆ.

ಈ ಏರಿಕೆಯು 2008ರ ಜುಲೈ ನಂತರ ಇದು ಅತ್ಯಧಿಕ ಮಟ್ಟದಲ್ಲಿ ಏರಿಕೆಯಾಗಿದೆ. 2008ರಲ್ಲಿ 143 ಡಾಲರ್(10,991 ರೂ.) ಏರಿಕೆಯಾಗಿತ್ತು. ಈ ಹಿಂದೆ ಬ್ರೆಂಟ್ ಕಚ್ಚಾ ತೈಲದ ಬೆಲೆಯು 2013ರ ಫೆಬ್ರವರಿಯಲ್ಲಿ ಮೊದಲ ಬಾರಿಗೆ ಒಂದು ಬ್ಯಾರೆಲ್ಗೆ 119 ಡಾಲರ್ (9,144 ರೂ.) ಏರಿಕೆಯಾಗಿತ್ತು. ಇದು ಈವರೆಗೆ ಗರಿಷ್ಠ ಮಟ್ಟದ ಏರಿಕೆಯಾಗಿತ್ತು. ಕಳೆದ ಬುಧವಾರ 1 ಬ್ಯಾರಲ್ಗೆ 113 ಡಾಲರ್ಗೆ (8,565 ರೂಪಾಯಿ) ಏರಿಕೆಯಾಗಿತ್ತು.

ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಸ್ಥಿರಗೊಳಿಸುವ ಯತ್ನದಲ್ಲಿ ಮಿತ್ರರಾಷ್ಟ್ರಗಳೊಂದಿಗೆ ತನ್ನ ಆಯಾಕಟ್ಟಿನ ಮೀಸಲುಗಳಿಂದ ಅಮೆರಿಕ ಸುಮಾರು 60 ಮಿಲಿಯನ್ ಬ್ಯಾರಲ್ ಬಿಡುಗಡೆ ಮಾಡಿದೆ. ಆದರೂ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆಯಾಗಿದೆ. 

ಕಳೆದ ನವೆಂಬರ್ನಲ್ಲಿ ಪೆಟ್ರೋಲ್-ಡೀಸೆಲ್ ಮೇಲಿನ ಸುಂಕವನ್ನು ಕೇಂದ್ರ ಸರಕಾರ ಕಡಿತಗೊಳಿಸಿತ್ತು. ಬಳಿಕ ತೈಲ ದರ ಪರಿಷ್ಕರಣೆಯಾಗಿಲ್ಲ. ಇದೀಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಯಾಗುತ್ತಿದ್ದರೂ ತೈಲ ಮಾರಾಟ ಕಂಪನಿಗಳು ಪಂಚ ರಾಜ್ಯಗಳ ಚುನಾವಣೆ ಕಾರಣಕ್ಕೆ ದರ ಏರಿಕೆಯನ್ನು ತಡೆ ಹಿಡಿದಿವೆ.

ದಲ್ಲಿ ಮಿತ್ರರಾಷ್ಟ್ರಗಳೊಂದಿಗೆ ತನ್ನ ಆಯಾಕಟ್ಟಿನ ಮೀಸಲುಗಳಿಂದ ಅಮೆರಿಕ ಸುಮಾರು 60 ಮಿಲಿಯನ್ ಬ್ಯಾರಲ್ ಬಿಡುಗಡೆ ಮಾಡಿದೆ. ಆದರೂ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆಯಾಗಿದೆ. 

ಕಳೆದ ನವೆಂಬರ್ನಲ್ಲಿ ಪೆಟ್ರೋಲ್-ಡೀಸೆಲ್ ಮೇಲಿನ ಸುಂಕವನ್ನು ಕೇಂದ್ರ ಸರಕಾರ ಕಡಿತಗೊಳಿಸಿತ್ತು. ಬಳಿಕ ತೈಲ ದರ ಪರಿಷ್ಕರಣೆಯಾಗಿಲ್ಲ. ಇದೀಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಯಾಗುತ್ತಿದ್ದರೂ ತೈಲ ಮಾರಾಟ ಕಂಪನಿಗಳು ಪಂಚ ರಾಜ್ಯಗಳ ಚುನಾವಣೆ ಕಾರಣಕ್ಕೆ ದರ ಏರಿಕೆಯನ್ನು ತಡೆ ಹಿಡಿದಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

Bengaluru Stampede: ಡಿಸಿಎಂ ವಿರುದ್ದವೇ ಆರೋಪಿಸಿ, ಪತಿಯ ಬಂಧನ ಪ್ರಶ್ನಿಸಿದ ನಿಖಿಲ್ ಸೋಸಲೆ ಪತ್ನಿ

ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಿದ್ದಾರೆ: ವಿಜಯೇಂದ್ರ

Chenab bridge inauguration, ಬ್ರಿಟಿಷರು ಮಾಡಲು ಸಾಧ್ಯವಾಗದ್ದನ್ನು, ಮೋದಿ ಮಾಡಿ ತೋರಿಸಿದ್ದಾರೆ: ಸಿಎಂ ಒಮರ್‌ ಅಬ್ದುಲ್ಲಾ

Bengaluru Stampede: ನಾವಲ್ಲ ನೀವೇ ಮಾಡಿರೋದು.. ಸರ್ಕಾರದ ವಿರುದ್ಧ ತಿರುಗಿಬಿದ್ದ ಕೆಎಸ್ ಸಿಎ

ಮುಂದಿನ ಸುದ್ದಿ
Show comments