ಎಚ್ಚರಿಕೆ…! ಬಹು ರೂಪಾಂತರಿ ವೈರಸ್ ತಳಿ

Webdunia
ಶುಕ್ರವಾರ, 26 ನವೆಂಬರ್ 2021 (12:12 IST)
ಹೊಸದಿಲ್ಲಿ : ಕೊರೊನಾ ವೈರಸ್ ಸೋಂಕಿನ ಹೊಸ ತಳಿ ಬಹು ರೂಪಾಂತರ ಹೊಂದುವ ಪ್ರಕರಣಗಳು
ವರದಿಯಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ಮೂರು ದೇಶಗಳಿಂದ ಬರುವ ಪ್ರಯಾಣಿಕರನ್ನು ಕಟ್ಟುನಿಟ್ಟಿನ ತಪಾಸಣೆ ಹಾಗೂ ಪರೀಕ್ಷೆಗೆ ಒಳಪಡಿಸುವಂತೆ ಗುರುವಾರ ಆದೇಶಿಸಿದೆ. ದಕ್ಷಿಣ ಆಫ್ರಿಕಾ, ಹಾಂಕಾಂಗ್ ಮತ್ತು ಬೋಟ್ಸ್ವಾನಾ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇರಿಸಲು ಸೂಚಿಸಲಾಗಿದೆ.
ಕೋವಿಡ್ 19 ಪಾಸಿಟಿವ್ ಕಂಡುಬಂದ ಪ್ರಯಾಣಿಕರ ಮಾದರಿಗಳನ್ನು ಸೂಚಿತ ಜೆನೋಮ್ ಸೀಕ್ವೆನ್ಸಿಂಗ್ ಲ್ಯಾಬೋರೇಟರಿಗಳಿಗೆ ಕಳುಹಿಸುವುದನ್ನು ಖಾತರಿಪಡಿಸಬೇಕು ಎಂದು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ.
'ಕೋವಿಡ್ 19 ಸೋಂಕಿನ 8.1.1529 ತಳಿಯ ಹಲವು ಪ್ರಕರಣಗಳು ಪತ್ತೆಯಾಗಿರುವುದಾಗಿ ಎನ್ಸಿಡಿಸಿ (ರಾಷ್ಟ್ರೀಯ ಕಾಯಿಲೆ ನಿಯಂತ್ರಣ ಕೇಂದ್ರ) ವರದಿ ಮಾಡಿದೆ. ಬೋಟ್ಸ್ವಾನಾದಲ್ಲಿ 3 ಪ್ರಕರಣಗಳು, ದಕ್ಷಿಣ ಆಫ್ರಿಕಾದಲ್ಲಿ 6 ಪ್ರಕರಣಗಳು ಮತ್ತು ಹಾಂಕಾಂಗ್ನಲ್ಲಿ 1 ಪ್ರಕರಣದಲ್ಲಿ ಈ ಹೊಸ ತಳಿಯ ಮಾರಕ ವೈರಸ್ ಇರುವುದು ಪತ್ತೆಯಾಗಿದೆ.
ಭಾರತದಲ್ಲಿ ಕೋವಿಡ್ ಪ್ರಕರಣ
ಭಾರತದಲ್ಲಿ ಶುಕ್ರವಾರ 10,549 ಹೊಸ ದೈನಂದಿನ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 488 ಮಂದಿ ಸೋಕಿತರು ಮೃತಪಟ್ಟಿದ್ದಾರೆ. 9,868 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಗುರುವಾರಕ್ಕೆ ಹೋಲಿಸಿದರೆ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಶೇ 15.6ರಷ್ಟು ಹೆಚ್ಚಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಮಳೆಯಿಲ್ಲ, ಈ ಜಿಲ್ಲೆಗಳಲ್ಲಿ ತಾಪಮಾನ ಭಾರೀ ಏರಿಕೆ

ಎಂಎಲ್‌ಎಗಳ ಜತೆ ಫೋಟೋಗೆ ಫೋಸ್ ಕೊಟ್ಟ ಸಿಎಂ ಸಿದ್ದರಾಮಯ್ಯ, ರಾಜಕೀಯದಲ್ಲಿ ಭಾರಿ ಚರ್ಚೆ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿಚಾರದಲ್ಲಿ ಮೂರನೇ ಬಾರಿ ಬಂದ ಆದೇಶವೇನು ಗೊತ್ತಾ

ಕ್ರಿಟಿಕಲ್ ಸ್ಥಿತಿಯಲ್ಲಿದ್ದ ಮಹಿಳೆ ದಾರಿ ಮಧ್ಯೆ ಸಾವು, ರಿಕ್ಷಾ ಡ್ರೈವರ್ ಮಾಡಿದ್ದೇನು ಗೊತ್ತಾ

ಅವನು ಸುಖವಾಗಿದ್ದಾನೆ, ಅಳುತ್ತಿದ್ದವರಿಗೆ ಹರೀಶ್ ರಾಣಾ ತಂದೆಯಾ ಭಾವುಕ ಮಾತು

ಮುಂದಿನ ಸುದ್ದಿ
Show comments