Webdunia - Bharat's app for daily news and videos

Install App

ಕರಾವಳಿ ಭಾಗದಲ್ಲಿ ಮಳೆ ಜೊತೆಗೆ ಸಮುದ್ರದಲ್ಲಿ ಭಾರೀ ಅಲೆಯ ಎಚ್ಚರಿಕೆ

Webdunia
ಗುರುವಾರ, 8 ಜೂನ್ 2023 (07:07 IST)
ಬೆಂಗಳೂರು : ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ 2-3 ದಿನ ಮಳೆಯ ಜೊತೆಗೆ ಸಮುದ್ರದಲ್ಲಿ ಭಾರೀ ಅಲೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
 
ವಾಯುಭಾರ ಕುಸಿತವು ಬೈಪೋರ್ಜಾಯ್ ಹೆಸರಿನ ಚಂಡಮಾರುತವಾಗಿ ಬದಲಾಗಿದ್ದು, ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಆತಂಕ ಹೆಚ್ಚಾಗಿದ್ದು, 4 ದಿನ ಮೀನುಗಾರಾರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕ, ಮಹಾರಾಷ್ಟ್ರ, ಕೇರಳ, ಗುಜರಾತ್ ಕರಾವಳಿ ಭಾಗದಲ್ಲಿ 3 ದಿನ ಭಾರೀ ಮಳೆ ಸಾಧ್ಯತೆ ಇದೆ. ಚಂಡಮಾರುತ ಹಿನ್ನೆಲೆ ಮುಂಗಾರು 4 ದಿನ ತಡವಾಗಿ ಕೇರಳ ಪ್ರವೇಶ ಮಾಡಲಿದೆ. ಅಲ್ಲದೆ ಈ ಬಾರಿಯ  ಮುಂಗಾರು ಪ್ರಬಲವಾಗಿರದೇ ದುರ್ಬಲವಾಗುವ ಸಾಧ್ಯತೆ ಇದೆ.

ಸದ್ಯ ಚಂಡಮಾರುತ ಹಿನ್ನೆಲೆಯಲ್ಲಿ ಮುಂಗಾರು ಮತ್ತಷ್ಟು ತಡವಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments