Publish Date: Sat, 27 Nov 2021 (10:52 IST)
Updated Date: Sat, 27 Nov 2021 (10:54 IST)
ಬೆಂಗಳೂರು : ಎರಡು ದಿನಗಳ ನಂತರ ಬೆಂಗಳೂರಿನಲ್ಲಿ ವೆದರ್ ಕೂಲ್ ಕೂಲ್ ಆಗಿದೆ. ಇನ್ನು ನಗರದ ಕೆಲವು ಕಡೆ ತುಂತುರು ಮಳೆಯಾಗುತ್ತಿದೆ.
ರಾಜ್ಯದ ರಾಜಧಾನಿಯಲ್ಲಿ ಇನ್ನೂ ಎರಡ್ಮೂರು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನ ಸುತ್ತಮುತ್ತ ಇನ್ನೇರಡು ದಿನ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ, ಚೆನ್ನೈಗೆ ಅಪ್ಪಳಿಸುವ ಚಂಡಮಾರುತದಿಂದ ಕರ್ನಾಟಕಕ್ಕೂ ಎಫೆಕ್ಟ್ ಆಗುವ ಸಾಧ್ಯತೆ ಇದೆ ಅಂತ ತಿಳಿಸಿದೆ.
ಮೈಸೂರು ಭಾಗ, ಉಡುಪಿವರೆಗೂ ಚಂಡಮಾರುತ ಅಪ್ಪಳಿಸುವ ಎಚ್ಚರಿಕೆ ನೀಡಿದೆ. ಅಲ್ಲದೇ ಕರ್ನಾಟಕದಲ್ಲಿ ನವೆಂಬರ್ 28 ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.