Webdunia - Bharat's app for daily news and videos

Install App

ಬೆಂಗಳೂರಿಗರೇ ಗಮನಿಸಿ, ಪೀಣ್ಯ ಸಂಚಾರ ಬಂದ್!

Webdunia
ಭಾನುವಾರ, 26 ಡಿಸೆಂಬರ್ 2021 (09:01 IST)
ನೆಲಮಂಗಲ : ಬೆಂಗಳೂರು- ತುಮಕೂರು ರಸ್ತೆಯನ್ನು ಸಂಪರ್ಕಿಸುವ ನವಯುಗ ಮೇಲ್ಸೇತುವೆಯಲ್ಲಿ ಬಿರುಕು ಮೂಡಿದ ಹಿನ್ನೆಲೆ ವಾಹನ ಸಂಚಾರಕ್ಕೆ ನಿರ್ಬಂಧವನ್ನು ಹೇರಲಾಗಿದೆ.

ಟಿ.ದಾಸರಹಳ್ಳಿಯ ಬಳಿಯ ದೀಪಕ್ ಬಸ್ ನಿಲ್ದಾಣದ ಬಳಿ ಮೇಲ್ಸೇತುವೆ ಬಿರುಕು ಮೂಡಿದ ಪರಿಣಾಮ ಕಿಲೋಮಿಟರ್ಗಟ್ಟಲೇ ಟ್ರಾಫಿಕ್ ಜಾಮ್ ಆಗಿದೆ. ಇದರಿಂದ ವಾಹನ ಸವಾರರು ಹೈರಾಣು ಆಗಿದ್ದಾರೆ.  ಈ ಹಿನ್ನೆಲೆಯಲ್ಲಿ ಮೇಲ್ಸೇತುವೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧವನ್ನು ಹೇರಿದ್ದು, ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶವನ್ನು ನೀಡಲಾಗಿದೆ. 

ಸರ್ವಿಸ್ ರಸ್ತೆಯಲ್ಲೂ ವಿಪರೀತ ಟ್ರಾಫಿಕ್ ಜಾಮ್ ಆದ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ತುಮಕೂರು ಕಡೆಯಿಂದ ಬರುವವರು ಮಾದವಾರ ಬಳಿ ಬಲ ತಿರುವು ಪಡೆದು ನೈಸ್ ರಸ್ತೆ ಮೂಲಕ ನಗರ ಪ್ರವೇಶಕ್ಕೆ ಸೂಚನೆಯನ್ನು ನೀಡಲಾಗಿದೆ.

ಬೆಂಗಳೂರಿನಿಂದ ತುಮಕೂರು ಕಡೆ ಹೋಗುವವರು, ಗೊರಗುಂಟೆಪಾಳ್ಯದ ಸಿಎಂಟಿಐ ಜಂಕ್ಷನ್ ಬಳಿ ಎಡ ತಿರುವು ಪಡೆದು ಸುಮನಹಳ್ಳಿ, ಮಾಗಡಿ ರಸ್ತೆ ಮೂಲಕ ನೈಸ್ ರಸ್ತೆಯಿಂದ ಹೊರ ಹೋಗಲು ಸೂಚಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments