Webdunia - Bharat's app for daily news and videos

Install App

ತಮಿಳುನಾಡಿಗೆ ನೀರು: ಇಂದು ಸುಪ್ರೀಂಕೋರ್ಟ್ನಲ್ಲಿ ಮಹತ್ವದ ವಿಚಾರಣೆ

Webdunia
ಬುಧವಾರ, 6 ಸೆಪ್ಟಂಬರ್ 2023 (09:19 IST)
ಮಂಡ್ಯ : ಸಾಕಷ್ಟು ಕುತೂಹಲ ಮೂಡಿಸಿರುವ ಕಾವೇರಿ ನೀರಿನ ಸಮಸ್ಯೆಯ ವಿಚಾರಣೆ ಇಂದು ಸುಪ್ರೀಂಕೋರ್ಟ್ನಲ್ಲಿ ನಡೆಯಲಿದೆ. ಈ ಮಹತ್ವದ ವಿಚಾರಣೆಯ ತೀರ್ಪಿಗೆ ಕಾವೇರಿ ತಾಯಿಯ ಮಕ್ಕಳು ಎದುರು ನೋಡ್ತಾ ಇದ್ದಾರೆ.
 
ಮುಂಗಾರು ಮಳೆ ಕೊರತೆಯಿಂದ ಕಾವೇರಿ ನದಿ ಅಕ್ಷರಶಃ ಒಣಗಿನಿಂತಿದೆ. ಕಾವೇರಿಯ ಒಡಲು ಎಂದು ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಕೆಆರ್ಎಸ್ ಡ್ಯಾಂನಲ್ಲಿ ನೀರಿನ ಮಟ್ಟ ನೆಲಕ್ಕೆ ಮುಟ್ಟುತ್ತಿದೆ. ಸದ್ಯ ಕೆಆರ್ ಎಸ್ ನೀರಿನ ಮಟ್ಟ 98.86 ಅಡಿಗೆ ಕುಸಿದಿದ್ದು, ಕಾವೇರಿ ಕೊಳ್ಳ ವ್ಯಾಪ್ತಿಯ ಜನರಿಗೆ ಭೀಕರ ಜಲಕ್ಷಾಮ ಎದುರಾಗೋ ಭೀತಿ ಶುರುವಾಗಿದೆ.

ಈ ಮಧ್ಯೆ ಪಕ್ಕದ ತಮಿಳುನಾಡು ಸಂಕಷ್ಟ ಸೂತ್ರ ಅನುಸರಿಸದೇ ನೀರು ಕೇಳುತ್ತಿದೆ. ಸಿಡಬ್ಲ್ಯೂಎಂಎ ಆದೇಶಕ್ಕೂ ತೃಪ್ತಿಕಾಣದ ತಮಿಳುನಾಡು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಇಂದು ಸುಪ್ರೀಂಕೋರ್ಟ್ನ ಸಾಂವಿಧಾನಿಕ ಪೀಠ ವಿಚಾರಣೆ ನಡೆಸಲಿದೆ.

ಕಾವೇರಿ ವಿಚಾರವಾಗಿ ಸಲ್ಲಿಕೆಯಾಗಿರುವ ನಾಲ್ಕು ಅರ್ಜಿಗಳನ್ನು ಇಂದು ಪರಿಶೀಲನೆ ಮಾಡಲಿರೋ ಸರ್ವೋಚ್ಛ ನ್ಯಾಯಾಲಯ ಇಂದೇ ಮಧ್ಯಂತರ ತೀರ್ಪು ನೀಡೋ ಸಾಧ್ಯತೆ ಇದೆ. ಜೂನ್, ಜುಲೈ, ಆಗಸ್ಟ್ ತಿಂಗಳ 80 ಟಿಎಂಸಿ ನೀರು ಬಿಟ್ಟಿಲ್ಲ ಎಂದು ತಮಿಳುನಾಡು ಅರ್ಜಿ ಸಲ್ಲಿಸಿದ್ರೆ, ಇತ್ತ ಕರ್ನಾಟಕವೂ ಪ್ರತಿ ದಾವೆ ಹೂಡಿದ್ದು, ಮುಂಗಾರು ಮಳೆ ಕೈಕೊಟ್ಟಿದೆ.

ಕೆಆರ್ಎಸ್, ಕಬಿನಿ, ಹೇಮಾವತಿ, ಹಾರಂಗಿ ಡ್ಯಾಂಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ನೀರು ತುಂಬಿಲ್ಲ. ಹೀಗಿದ್ರು ಸಹ ಮೂರು ತಿಂಗಳಿಂದ ಇಲ್ಲಿಯವರೆಗೆ 35 ಟಿಎಂಸಿ ನೀರು ಬಿಟ್ಟಿದ್ದೇವೆ, ತಮಿಳುನಾಡು ಹೇಳುವಷ್ಟು ನೀರು ಬಿಟ್ಟರೆ ಇಲ್ಲಿನ ಜನರಿಗೆ ಕುಡಿಯೋ ನೀರಿಗೆ ಸಮಸ್ಯೆ ಆಗುತ್ತೆ ಎಂದು ಉಲ್ಲೇಖ ಮಾಡಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರ್ಮಿಕರ ಒತ್ತಡಕ್ಕೆ ಮಣಿದು 12 ಗಂಟೆ ಕೆಲಸದ ಬಗ್ಗೆ ಮಹತ್ವದ ನಿರ್ಧಾರ ಮಾಡಿದ ಸರ್ಕಾರ

ಪ್ರಜ್ವಲ್ ರೇವಣ್ಣ ರೇಪ್ ಕೇಸ್: ಇಂದು ತೀರ್ಪಿನ ದಿನ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments