Webdunia - Bharat's app for daily news and videos

Install App

ನುಡಿದಂತೆ ನಡೆದಿದ್ದೇವೆ, ಕರ್ನಾಟಕ ದಿವಾಳಿಯಾಗಿಲ್ಲ ಮೋದಿಯವರೇ : ಸಿಎಂ ಸಿದ್ದರಾಮಯ್ಯ

Webdunia
ಗುರುವಾರ, 31 ಆಗಸ್ಟ್ 2023 (11:42 IST)
ಮೈಸೂರು : ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಹಾಗೂ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ಧೂರಿ ಚಾಲನೆ ದೊರೆತಿದೆ. ಇದೇ ವೇಳೆ ನೂರು ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಸಾಧನೆಯನ್ನ ಕೈಪಿಡಿ ಮೂಲಕ ಹೊರತರಲಾಗಿದೆ.
 
ಗೃಹಲಕ್ಷ್ಮಿ ಯೋಜನೆ ಚಾಲನೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಹಿಂದೆ 165 ಭರಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಗ್ಯಾರಂಟಿ ಯೋಜನೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನ ಮತ್ತೊಮ್ಮೆ ಸಾಬೀತು ಮಾಡಿದೆ. ಈ ಬಾರಿಯೂ ಕಾಂಗ್ರೆಸ್ ಸರ್ಕಾರ ನೀಡಿದ ಎಲ್ಲ ಭರವಸೆಗಳನ್ನು 5 ವರ್ಷಗಳಲ್ಲಿ ಈಡೇರಿಸುತ್ತೇವೆ ಎನ್ನುವ ವಿಶ್ವಾಸ ನಮಗಿದೆ ಎಂದು ಹೇಳಿದ್ದಾರೆ. 

ಗ್ಯಾರಂಟಿಗಳನ್ನು ಘೋಷಣೆ ಮಾಡಿದಾಗ ಇದನ್ನ ನೆರವೇರಿಸಲು ಸಾಧ್ಯವಿಲ್ಲ ಅಂತ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಟೀಕೆ ಮಾಡಿದವು. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತೆ ಅಂತಾ ಹೇಳಿದ್ದರು. ಆದ್ರೆ ನಾವಿಂದು ನಾಲ್ಕು ಗ್ಯಾರಂಟಿಗಳನ್ನ ಜಾರಿ ಮಾಡಿದ್ದೇವೆ.

ಯುವನಿಧಿ 5ನೇ ಗ್ಯಾರಂಟಿ ಡಿಸೆಂಬರ್ ಅಥವಾ ಜನವರಿಯಲ್ಲಿ ಜಾರಿಗೆ ಬರುತ್ತದೆ. ಆದ್ರೆ ಕರ್ನಾಟಕ ದಿವಾಳಿ ಆಗಿಲ್ಲ. ಅಭಿವೃದ್ಧಿ ಕಾರ್ಯಕ್ರಮಗಳೂ ಸಹ ನಿಂತಿಲ್ಲ ಎಂದು ತಿರುಗೇಟು ನೀಡಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments