Webdunia - Bharat's app for daily news and videos

Install App

ಡಿಸೆಂಬರ್ ಅಂತ್ಯದೊಳಗೆ ರಾಜ್ಯದ ಎಲ್ಲರಿಗೂ ಲಸಿಕೆ ನೀಡುತ್ತೇವೆ; ಸುಧಾಕರ್

Webdunia
ಸೋಮವಾರ, 30 ಆಗಸ್ಟ್ 2021 (13:49 IST)
ಬೆಂಗಳೂರು(ಆ.30): ಇವತ್ತು ಕೊವೀಡ್ ಸಭೆ ಕರೆದಿದ್ದೆವು. ಲಸಿಕೆ ವಿಚಾರವಾಗಿ ಸಭೆ ನಡೆಸಿದೆವು. ಆಗಸ್ಟ್ ತಿಂಗಳಲ್ಲಿ ಒಂದು ಕೋಟಿ ಹತ್ತು ಲಕ್ಷ ಲಸಿಕೆ ನೀಡಿದ್ದೇವೆ.  ನಾನು ಮತ್ತು ಸಿಎಂ ದೆಹಲಿಯಲ್ಲಿ ಆರೋಗ್ಯ ಸಚಿವರ ಭೇಟಿ ಮಾಡಿದ್ದೆವು. ಅದರ ಪ್ರತಿಫಲವಾಗಿ ಇಷ್ಟೊಂದು ಪ್ರಮಾಣದ ಲಸಿಕೆ ನೀಡಿದ್ದೇವೆ. ಇನ್ಮೇಲೆ ಪ್ರತಿದಿನ ಐದು ಲಸಿಕೆನೀಡುತ್ತೇವೆ. ಅದನ್ನು ದ್ವಿಗುಣ ಮಾಡುವ ಗುರಿಯಿದೆ.

ಲಸಿಕಾ ಉತ್ಸವ ಅಂತ ಕಾರ್ಯಕ್ರಮ ಮಾಡುವ ಪ್ಲಾನ್ ಇದೆ.  ಬೆಂಗಳೂರು ಸೇರಿದಂತೆ ಮಹಾನಗರದಲ್ಲಿ ಹೆಚ್ಚು ಲಸಿಕೆ ಹಾಕಿದ್ದೇವೆ. ಕೆಲ ಜಿಲ್ಲೆಗಳಲ್ಲಿ ಲಸಿಕೆ ತೆಗೆದುಕೊಳ್ಳಲು ಜನ ಹಿಂಜರಿಯುತ್ತಿದ್ದಾರೆ. ಅದನ್ನು ಸರಿಪಡಿಸಬೇಕಿದೆ. ಬೆಂಗಳೂರಿನ ಸ್ಲಂಗಳಲ್ಲಿ ಲಸಿಕಾ ಉತ್ಸವ ಮಾಡುತ್ತೇವೆ. ಶೀಘ್ರವಾಗಿ ಈ ಕಾರ್ಯಕ್ರಮ ರೂಪಿಸುತ್ತೇವೆ. ಕೇರಳದ ಗಡಿ ಜಿಲ್ಲೆಗಳಲ್ಲಿ ಲಸಿಕೆ ಹೆಚ್ಚು ಮಾಡುತ್ತಿದ್ದೇವೆ. ಮೊದಲ ಪ್ರಾಶಸ್ತ್ಯ ದಲ್ಲಿ ಲಸಿಕೆ ನೀಡುತ್ತೇವೆ. ರಾಜ್ಯದ ಎಲ್ಲ ಜನತೆಗೆ ಡಿಸೆಂಬರ್ ಅಂತ್ಯದ ಒಳಗೆ ಲಸಿಕೆ ನೀಡುತ್ತೇವೆ.  ಮಕ್ಕಳಿಗೆ ಲಸಿಕೆ ಪರವಾನಿಗೆಗೆ ಕಾಯುತ್ತಿದ್ದೇವೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದರು.
ಮೂರನೆ ಅಲೆ ಬಂದಿಲ್ಲ. ಇನ್ನೂ ಎರಡನೇ ಅಲೆ ಇದೆ. ಮಕ್ಕಳಿಗೂ ಲಸಿಕೆ ಬಗ್ಗೆ ಪರವಾನಗಿ ಸಿಗಬೇಕಿದೆ. ಅನುಮತಿ ಸಿಕ್ಕರೆ ಮಕ್ಕಳಿಗೂ ಲಸಿಕೆ ನೀಡಲಾಗುವುದು. ಕೆಲವು ತಾಂತ್ರಿಕ ಸಮಸ್ಯೆಯಾಗಿದೆ. ಮೊದಲ ಡೋಸ್ ಪಡೆಯುವಾಗ ಒಂದು ನಂಬರ್ ಕೊಡ್ತಾರೆ. 2ನೇ ಡೋಸ್ ವೇಳೆ ಮತ್ತೊಂದು ನಂಬರ್ ನೀಡ್ತಾರೆ. ಜನರ ಈ ನಡೆ ಸಮಸ್ಯೆಯನ್ನ ತಂದಿದೆ.  ಬೆಂಗಳೂರಿನಲ್ಲಿ ಉತ್ತಮ ನಡೆ ತೆಗೆದುಕೊಂಡಿದ್ದೇವೆ. ಸರ್ಕಾರದ ಜೊತೆ ಜನರು ಕೈಜೋಡಿಸಬೇಕು ಎಂದರು.
ಮೂರನೇ ಅಲೆ ಕೆಲವು ರಾಜ್ಯಗಳಲ್ಲಿ ಪ್ರಾರಂಭವಾಗಿದೆ. ರಾಜ್ಯದಲ್ಲಿ ಮೂರನೇ ಅಲೆ ಭಾದಿಸಬಾರದು. ಆರೋಗ್ಯ ಇಲಾಖೆ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಅಲೆ ಎದುರಾಗದಂತೆ ನಾವು ತಡೆಯಬೇಕಿದೆ ಎಂದು ಹೇಳಿದರು.
ಶಿಕ್ಷಣ ಕ್ಷೇತ್ರದಲ್ಲಿ ಗಟ್ಟಿ ನಿರ್ಧಾರ ಮಾಡಿದ್ದೇವೆ. 9ರ ನಂತರದ ಶಿಕ್ಷಣಕ್ಕೆ ಅವಕಾಶ ಕೊಟ್ಟಿದ್ದೇವೆ. 6 ರಿಂದ 8 ರವರೆಗೆ ತರಗತಿ ಆರಂಭವಾಗಬೇಕು. ಇಂದು ಸಭೆಯಲ್ಲಿ ಇದರ ಚರ್ಚೆಯಾಗಿದೆ. ಸಂಜೆ ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಧರಿಸುತ್ತೇವೆ.  ಪೋಷಕರಿಂದಲೂ ಶಾಲೆ ಪ್ರಾರಂಭಕ್ಕೆ ಒತ್ತಡವಿದೆ. ಪ್ರಸ್ತುತ ಶಾಲೆ ತೆರೆದಿರುವುದರಿಂದ ಸಮಸ್ಯೆಯಾಗಿಲ್ಲ. ಹಾಗಾಗಿ 6 ರಿಂದ 8ನೇ ತರಗತಿ ತೆರೆಯುವ ಬಗ್ಗೆ ನಿರ್ಧಾರ ಮಾಡಲಾಗುತ್ತದೆ. ಸಿಎಂ ಸಭೆಯಲ್ಲಿ ಒಂದು ನಿರ್ಧಾರ ತೆಗೆದುಕೊಳ್ತೇವೆ ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments