Select Your Language

Notifications

webdunia
webdunia
webdunia
webdunia

ಇಂದು ಸಿಎಂ ದೆಹಲಿಗೆ ತೆರೆಳುವ ಕಾರಣವಾದ್ರು ಏನು?

ಇಂದು ಸಿಎಂ ದೆಹಲಿಗೆ ತೆರೆಳುವ ಕಾರಣವಾದ್ರು ಏನು?
ಬೆಂಗಳೂರು , ಮಂಗಳವಾರ, 10 ಮೇ 2022 (09:16 IST)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ ತೆರಳಿದ್ದಾರೆ.

ದೆಹಲಿಗೆ ಹೋಗುವ ಮೊದಲು ಸಿಎಂ ಮನೆಗೆ ಕೋಟಾ ಶ್ರೀನಿವಾಸ ಪೂಜಾರಿ, ಅರವಿಂದ್ ಬೆಲ್ಲದ್, ಹರತಾಳು ಹಾಲಪ್ಪ ಮೊದಲಾದವರು ಆಗಮಿಸಿದರು. ಕೆಲ ಕಾಲ ಸಿಎಂ ಜೊತೆ ಚರ್ಚೆ ಮಾಡಿ ನಾಯಕರು ಆರ್ ಟಿನಗರ ನಿವಾಸದಿಂದ ತೆರಳಿದ್ದಾರೆ.

ಇತ್ತ ಸಿಎಂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ತಮ್ಮ ಆರ್ ಟಿನಗರ ನಿವಾಸದಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳಿದರು. ಸಿಎಂ ಅವರು ಜಾಗತಿಕ ಬಂಡವಾಳ ಹೂಡಿಕೆದಾರ ರಾಷ್ಟ್ರಗಳ ರಾಯಭಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದಾರೆ. 

ಇಂದು ರಾತ್ರಿ ದೆಹಲಿಯಲ್ಲೇ ವಾಸ್ತವ್ಯ ಹೂಡಲಿರುವ ಅವರು, ನಾಳೆ ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕರೆಂಟು ಹೋದ ಟೈಮಲಿ! ಮದುವೆ ಗಂಡೇ ಅದಲು ಬದಲು!