Webdunia - Bharat's app for daily news and videos

Install App

ನಮ್ಮ ಮೆಟ್ರೋದಲ್ಲಿ ವಿಶೇಷ ಪಾಸ್ ವಿಶೇಷತೆ ಏನು?

Webdunia
ಗುರುವಾರ, 31 ಮಾರ್ಚ್ 2022 (07:30 IST)
ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಲು ಅನುಕೂಲವಾಗುವಂತೆ ಬಿಎಂಆರ್ಸಿಎಲ್ 1 ದಿನದ ಮತ್ತು 3 ದಿನದ ಪಾಸ್ಗಳನ್ನು ಪರಿಚಯಿಸಿದೆ.
 
ಬಿಎಂಆರ್ಸಿಎಲ್ ಕ್ಲೈಮ್ ಮಾಡದ ಆನ್ಲೈನ್ ಸ್ಮಾರ್ಟ್ ಕಾರ್ಡ್ ರೀಚಾರ್ಜ್ಗಳು ಮತ್ತು ಆನ್ಲೈನ್ ಸ್ಮಾರ್ಟ್ಕಾರ್ಡ್ ಟಾಪ್ ಆಪ್ಗಳನ್ನು ಮರುಪಾವತಿ ಮಾಡಲಾಗುತ್ತದೆ. ಇವುಗಳು ದಿನಾಂಕ ಏಪ್ರಿಲ್ 2 ರಿಂದ ಜಾರಿಯಾಗಲಿದೆ. 

200 ರೂ.ಗಳ ಬೆಲೆಯ 1 ದಿನದ ಪಾಸ್ ದರದಲ್ಲಿ ಮರುಪಾವತಿಸಬಹುದಾದ ಭದ್ರತಾ ಠೇವಣಿ ರೂ.50 ಒಳಗೊಂಡಿದೆ. ಇದು ಖರೀದಿಯ ದಿನಾಂಕದಂದು ಮಾತ್ರ ನಮ್ಮ ಮೆಟ್ರೋದಲ್ಲಿ ಅನಿಯಮಿತ ಪ್ರಯಾಣವನ್ನು ಅನುಮತಿಸುತ್ತದೆ.

400 ರೂ.ಗಳ ಬೆಲೆಯ 3 ದಿನದ ಪಾಸ್ ದರದಲ್ಲಿ ಮರುಪವತಿಸಬಹುದಾದ ಭದ್ರತಾ ಠೇವಣಿ 50 ರೂ. ಒಳಗೊಂಡಿದೆ. ಈ ಪಾಸ್ ಖರೀದಿಸಿದ ದಿನಾಂಕದಿಂದ 3 ದಿನಗಳವರೆಗೆ ನಮ್ಮ ಮೆಟ್ರೋದಲ್ಲಿ ಅನಿಯಮಿತ ಪ್ರಯಾಣವನ್ನು ಅನುಮತಿಸುತ್ತದೆ.

1 ದಿನದ ಮತ್ತು 3 ದಿನದ ಪಾಸ್ಗಳು ನಿಲ್ದಾಣದ ಟಿಕೆಟ್ ಕೌಂಟರ್ಗಳಲ್ಲಿ ಲಭ್ಯವಿರುತ್ತದೆ. ಪ್ರಯಾಣಿಕರು 1 ದಿನದ ಅಥವಾ 3 ದಿನದ ಪ್ರಯಾಣವನ್ನು ಪೂರ್ಣಗೊಳಿಸಿದ ನಂತರ ಯಾವುದೇ ಗ್ರಾಹಕ ಸಂಪರ್ಕ ಕೇಂದ್ರಗಳಲ್ಲಿ ಸ್ಮಾರ್ಟ್ ಕಾರ್ಡ್ ಅನ್ನು ಉತ್ತಮ ಸ್ಥಿತಿಯಲ್ಲಿ ಹಿಂದಿರುಗಿಸಿದರೆ, ಪ್ರಯಾಣಿಕರು 50 ರೂ. ಮರುಪಾವತಿಸಬಹುದಾದ ಭದ್ರತಾ ಠೇವಣಿಯನ್ನು ಹಿಂಪಡೆಯಬಹುದು.

ಪ್ರಯಾಣಿಕರು ಆನ್ಲೈನ್ನಲ್ಲಿ ಅಂದರೆ ವೆಬ್ಸೈಟ್ ಅಥವಾ ಮೊಬೈಲ್ ಅಪ್ಲಿಕೇಶನ್ ಮೂಲಕ ರೀಚಾರ್ಜ್ ಮಾಡಿದ ಮೊತ್ತವನ್ನು ಸ್ಮಾರ್ಟ್ ಕಾರ್ಡ್ಗೆ 1 ಗಂಟೆಯ ನಂತರ ಮತ್ತು ರೀಚಾರ್ಜ್ ಮಾಡಿದ ದಿನಾಂಕದಿಂದ 7 ದಿನಗಳ ಒಳಗೆ ಎಫ್ಸಿ ಗೇಟ್ನಲ್ಲಿ ಟ್ಯಾಪ್ ಮಾಡುವ ಮೂಲಕ ಅಥವಾ ಕಾರ್ಡ್ ಟಾಪ್-ಅಪ್ ಟರ್ಮಿನಲ್ಗಳಲ್ಲಿ ಸಿಟಿಟಿ ರೀಚಾರ್ಜ್ ಮಾಡಿದ ದಿನಾಂಕದಿಂದ 15 ದಿನಗಳಲ್ಲಿ ನವೀಕರಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

ಮುಂದಿನ ಸುದ್ದಿ
Show comments