Webdunia - Bharat's app for daily news and videos

Install App

ಭಾರತದ ವೈಭವ ಅನಾವರಣ ವಿಶೇಷತೆ ಏನು?

Webdunia
ಬುಧವಾರ, 26 ಜನವರಿ 2022 (14:32 IST)
ನವದೆಹಲಿ : ದೇಶಾದ್ಯಂತ 73ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಗಿದೆ.

ದೆಹಲಿ ರಾಜಪಥ್ನಲ್ಲಿ ಭಾರತದ ಸ್ವತಂತ್ರ್ಯೋತ್ಸವದ ಅಮೃತಮಹೋತ್ಸವ ಸಂಭ್ರಮ, ಕೋವಿಡ್ ಮಾರ್ಗಸೂಚಿಯ ನಡುವೆ ಗಣರಾಜ್ಯೋತ್ಸವ ಪರೇಡ್ ಸಂಭ್ರಮದಿಂದ ನಡೆಯಿತು.

ರಾಜಪಥ್ನಲ್ಲಿ ವಿರಾಟ್ ಭಾರತದ ಒಂದು ವಿಹಾಂಗಮ ನೋಟವನ್ನು ಪ್ರದರ್ಶಿಸಲಾಯಿತು. ನವ ಭಾರತದ ಮಿಲಿಟರಿ ಶಕ್ತಿ ಇಂದಿನ ಸಮಾರಂಭದಲ್ಲಿ ಅನಾವರಣಗೊಂಡಿತು.

ಈ ಸಮಾರಂಭದಲ್ಲಿ ಮೊಟ್ಟ ಮೊದಲ ಬಾರಿಗೆ 75 ವಿಮಾನಗಳು ಭವ್ಯ ಫ್ಲೈ-ಪಾಸ್ಟ್ ಮಾಡಿದವು. ಇದರೊಂದಿಗೆ ಪರೇಡ್ನಲ್ಲಿ ಹಲವು ರಾಜ್ಯಗಳ ಸ್ತಬ್ಧ ಚಿತ್ರ, ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡಗರ ಕಣ್ಮನ ಸೆಳೆಯಿತು.

ಬೆಳಗ್ಗೆ 10:30 ಸುಮಾರಿಗೆ ಆರಂಭಗೊಂಡ ಪರೇಡ್ ಕಾರ್ಯಕ್ರಮ 12:15ಕ್ಕೆ ಮುಕ್ತಾಯಗೊಂಡಿತು. ಪ್ರತಿ ವರ್ಷ ಈ ಕಾರ್ಯಕ್ರಮ ಬೆಳಗ್ಗೆ 10 ಗಂಟೆಯಿಂದ ಆರಂಭವಾಗುತ್ತಿತ್ತು. ಈ ಬಾರಿ 30 ನಿಮಿಷ ತಡವಾಗಿ ಆರಂಭಗೊಂಡಿತು. ರಾಜಪಥ್ನಲ್ಲಿ ಮಂಜು ಆವರಿಸಿಕೊಂಡಿದ್ದ ಕಾರಣ ಈ ಬಾರಿ ಕಾರ್ಯಕ್ರಮವನ್ನು ಪೂರ್ವನಿಗದಿಯಂತೆ 10:30ಕ್ಕೆ ಆರಂಭಿಸಲಾಯಿತು.

ಕೊರೊನಾ ಕಾಟದಿಂದಾಗಿ ಕಳೆದ ಬಾರಿಯಂತೆ ಈ ವರ್ಷ ಕೂಡಾ ಯಾವುದೇ ವಿದೇಶಿ ಮುಖ್ಯ ಅತಿಥಿಗೆ ಆಹ್ವಾನ ನೀಡಿಲ್ಲ. ಈ ಮೂಲಕ ಸತತ 2ನೇ ವರ್ಷ ಯಾವುದೇ ವಿದೇಶಿ ಅತಿಥಿ ಇಲ್ಲದೆ ಗಣರಾಜ್ಯೋತ್ಸವದ ಆಚರಣೆ ನಡೆಯಿತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments