Webdunia - Bharat's app for daily news and videos

Install App

ರಂಜಾನ್ ಉಪವಾಸ ಆಚರಣೆಯ ವಿಶೇಷತೆ ಏನು?

Webdunia
ಭಾನುವಾರ, 3 ಏಪ್ರಿಲ್ 2022 (15:30 IST)
ಈ ಮಾಸದಲ್ಲಿ ಮುಸ್ಲಿಮರು 30 ದಿನ ಉಪವಾಸ ಆಚರಿಸುವ ಜೊತೆಗೆ ದಾನ-ಧರ್ಮ, ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುತ್ತಾರೆ.

ಇಸ್ಲಾಮಿನ ತರಾವೀಹ್, ನಮಾಜ್, ಉಪವಾಸ, ಝಕಾತ್ (ದಾನ), ಹಜ್ ಎಂಬ ಪಂಚಕರ್ಮಗಳನ್ನು ನೇರವೇರಿಸುವ ರಂಜಾನ್ ಪುಣ್ಯ ಸಂಪಾದಿಸುವ ಮಾಸವೂ ಎನಿಸಿಕೊಂಡಿದೆ.

ಈ ಸಮಯದಲ್ಲಿ ಆತ್ಮನಿಯಂತ್ರಣದ ಜತೆಗೆ ಸಂಯಮ ರೂಢಿಸಿಕೊಳ್ಳುವುದನ್ನು ಕಲಿಯುತ್ತಾರೆ. ಬಡವರ ಹಸಿವು ಅರಿಯುವ ಜೊತೆಗೆ ಒಂದು ಹೊತ್ತಿನ ಊಟಕ್ಕೆ ಕಷ್ಟಪಡುವವರ ಜೀವನ ಹೇಗಿರಬಹುದು? ಎಂಬ ಪಾಠವನ್ನೂ ಉಪವಾಸ ಕಲಿಸುತ್ತದೆ.

ಅಲ್ಲದೆ ರಾತ್ರಿ ವೇಳೆ ನಡೆಯುವ ವಿಶೇಷ ತರಾವೀಹ್ ನಮಾಜ್ಗಳಲ್ಲಿ ಪವಿತ್ರ ಕುರಾನ್ ಪಠಿಸಲಾಗುತ್ತದೆ. ಕುರಾನ್ನನ್ನು ಸಂಪೂರ್ಣವಾಗಿ ಬಾಯಿಪಾಠ ಮಾಡಿರುವವರು ಈ ನಮಾಜ್ಗೆ ನೇತೃತ್ವ ವಹಿಸುತ್ತಾರೆ. 

ಮನುಷ್ಯನನ್ನು ಅನ್ಯಚಿತ್ತದೆಡೆಗೆ ಕೊಂಡೊಯ್ಯುವ ಮಾರ್ಗವನ್ನು ಮುಚ್ಚಿ, ಒಳಿತಿನ ಬಗ್ಗೆ ಮಾತ್ರ ಚಿಂತಿಸುವಂತೆ ಮಾಡುವುದು ರಂಜಾನ್ ಮಾಸದ ವಿಶೇಷ.

ಹಾಗಾಗಿಯೇ ಈ ಮಾಸದಲ್ಲಿ ಅಲ್ಲಾನ ಪ್ರೀತಿಗಳಿಸುವ ಇಚ್ಛೆಯೊಂದಿಗೆ ಆಹಾರ, ಮದ್ಯ ಸೇವನೆಯನ್ನೂ ತ್ಯಜಿಸುತ್ತಾರೆ. ಕಾಮಾಸಕ್ತಿ, ಮನರಂಜನೆಯಿಂದ ದೂರವಿದ್ದು, ದುಡಿಮೆ ನಂಬಿ ಬದುಕುತ್ತಾರೆ. 

ಈ ಮಾಹೆಯಲ್ಲಿ ದಾನ-ಧರ್ಮಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ದಾನ ಮಾಡುವುದರಿಂದ ಹೆಚ್ಚಿನ ಪುಣ್ಯ ಲಭಿಸುತ್ತದೆ. ಶ್ರೀಮಂತರು ಮತ್ತು ಉಳ್ಳವರು ತಮ್ಮ ಸಂಪತ್ತಿನ ಶೇ 2.5 ಪಾಲನ್ನು ಝಕಾತ್ (ದಾನ) ರೂಪದಲ್ಲಿ ಬಡವರಿಗೆ ನೀಡುವುದನ್ನು ಇಸ್ಲಾಂ ಕಡ್ಡಾಯಗೊಳಿಸಿದೆ.

ಉಪವಾಸವೂ ಸಹ್ರಿಯಿಂದ ಆರಂಭವಾಗಿ ಇಫ್ತಾರ್ನೊಂದಿಗೆ ಕೊನೆಗೊಳ್ಳುತ್ತದೆ. ಸೂರ್ಯೋದಯಕ್ಕೆ ಸುಮಾರು ಒಂದು ಗಂಟೆ ಮುನ್ನ ಸೇವಿಸುವ ಆಹಾರಕ್ಕೆ ಸಹ್ರಿ ಎನ್ನುವರು.

ಮನೆಗಳಲ್ಲಿ ಇಫ್ತಾರ್ಗೆ ಖರ್ಜೂರ, ಹಣ್ಣುಗಳು ಮತ್ತು ಹಣ್ಣಿನ ರಸ ಸೇರಿದಂತೆ ವಿವಿಧ ರೀತಿಯ ಭಕ್ಷ್ಯಗಳನ್ನು ಸಿದ್ಧಪಡಿಸಲಾಗುತ್ತದೆ. ಮಸೀದಿಗಳಲ್ಲೂ ಸಾಮೂಹಿಕ ಇಫ್ತಾರ್ ಆಯೋಜನೆ ನಡೆಯುತ್ತದೆ. ಇದರೊಂದಿಗೆ ಈ ಮಾಹೆಯಲ್ಲಿ ಅಲ್ಲಲ್ಲಿ ಸೌಹಾರ್ದ ಇಫ್ತಾರ್ ಕೂಟಗಳೂ ನಡೆಯುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments