ರಷ್ಯಾ ಹಿನ್ನಡೆಗೆ ಕಾರಣ ಏನು?

Webdunia
ಗುರುವಾರ, 3 ಮಾರ್ಚ್ 2022 (09:35 IST)
ಕೀವ್ : ಉಕ್ರೇನ್-ರಷ್ಯಾ ಯುದ್ಧ ಏಳನೇ ದಿನ ಪೂರೈಸಿದೆ. ಆದರೆ ಈವರೆಗೂ ಉಕ್ರೇನ್ ಮೇಲೆ ರಷ್ಯಾ ಪೂರ್ಣ ಪ್ರಮಾಣದಲ್ಲಿ ಅಧಿಪತ್ಯ ಸ್ಥಾಪಿಸಿಲ್ಲ.

ಒಂದು ದೇಶದ ಮೇಲೆ ದಂಡೆತ್ತಿ ಹೋಗುವ ಸೈನ್ಯ ಮೊದಲು ಅಲ್ಲಿನ ವೈಮಾನಿಕ, ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳನ್ನು ಗಮನದಲ್ಲಿ ಇರಿಸಿಕೊಂಡು ದಾಳಿ ನಡೆಸುತ್ತದೆ. ಈ ಮೂಲಕ ಆ ದೇಶದ ವಾಯುಪ್ರದೇಶದ ಮೇಲೆ ಹಿಡಿತ ಸಾಧಿಸುತ್ತದೆ.

ಈ ಮೂಲಕ ಭೂಸೇನೆ ಸಮರ್ಥವಾಗಿ ಹೋರಾಟ ಸಾಗಿಸಲು ಅನುಕೂಲ ಕಲ್ಪಿಸುತ್ತದೆ. ಆದರೆ ಇದು ರಷ್ಯಾ ಕಡೆಯಿಂದ ಆಗಿಲ್ಲ. ಪರಿಣಾಮ, ಉಕ್ರೇನ್ ಯುದ್ಧ ವಿಮಾನಗಳು ಆರ್ಭಟಿಸುತ್ತಿವೆ.

ಕಡಿಮೆ ಎತ್ತರದಲ್ಲಿ ಹಾರುತ್ತಾ ರಷ್ಯಾದ ಹೆಲಿಕಾಪ್ಟರ್ಗಳನ್ನು ಟಾರ್ಗೆಟ್ ಮಾಡುತ್ತಿವೆ. ಸ್ಟಿಂಗರ್ ಕ್ಷಿಪಣಿ ಮೂಲಕವೂ ರಷ್ಯಾದ ಹೆಲಿಕಾಪ್ಟರ್ ನಾಶ ಮಾಡಲಾಗುತ್ತಿದೆ.  

ಯುದ್ಧಕ್ಕೆ ರಷ್ಯಾ ಸೈನಿಕರ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ. ರಷ್ಯಾದ ಯುವ ಸೈನಿಕರಿಗೆ ಸರಿಯಾದ ಶಿಕ್ಷಣ ಸಿಕ್ಕಿಲ್ಲ. ಆತ್ಮಸ್ಥೈರ್ಯ ಕಡಿಮೆ. ಆಹಾರ, ಇಂಧನ ಕೊರತೆ ಕಾಡುತ್ತಿದೆ. ತಮ್ಮ ವಾಹನಗಳನ್ನು ತಾವೇ ಉದ್ದೇಶಪೂರ್ವಕವಾಗಿ ಪಂಕ್ಚರ್ ಮಾಡುತ್ತಿದ್ದಾರೆ. ಉಕ್ರೇನ್ ನಗರಗಳ ಮೇಲೆ ದಾಳಿಗೆ ರಷ್ಯನ್ ಸೈನಿಕರು ಹಿಂದೇಟು ಹಾಕುತ್ತಿದ್ದಾರೆ. ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದ್ದಾರೆ ಎಂದು ಅಮೆರಿಕದ ಪೆಂಟಗಾನ್ ವರದಿ ಮಾಡಿದೆ.

.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments