ಕಾರ್ಮಿಕ ಸಂಹಿತೆಯ ವಿಶೇಷತೆ ಏನು?

Webdunia
ಬುಧವಾರ, 22 ಡಿಸೆಂಬರ್ 2021 (09:03 IST)
ನವದೆಹಲಿ : ವೇತನ, ಸಾಮಾಜಿಕ ಭದ್ರತೆ, ಕೈಗಾರಿಕಾ ಸಂಬಂಧಗಳು ಮತ್ತು ಔದ್ಯೋಗಿಕ ಸುರಕ್ಷತೆ ದೃಷ್ಟಿಯಿಂದ ಮುಂದಿನ ಹಣಕಾಸು ವರ್ಷದಿಂದ ಭಾರತವು 4 ಹೊಸ ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಕೈಗೆ ಕಡಿಮೆ ಸಂಬಳ, ಪಿಎಫ್ ಹೆಚ್ಚಳ
ಹೊಸ ಸಂಹಿತೆಗಳು ಜಾರಿಗೆ ಬಂದರೆ, ನೌಕರರ ಕೈಗೆ ಸಿಗುವ ಸಂಬಳದ ಮೊತ್ತ ಕಡಿಮೆಯಾಗಲಿದ್ದು, ಭವಿಷ್ಯನಿಧಿ ಖಾತೆಗೆ (ಪಿಎಫ್) ಜಮಾ ಆಗುವ ಮೊತ್ತ ಹೆಚ್ಚಳವಾಗಲಿದೆ.

ಎಲ್ಲ ಬಗೆಯ ಭತ್ಯೆಗಳು ನೌಕರರ ಒಟ್ಟು ವೇತನದ ಶೇಕಡ 50ರಷ್ಟನ್ನು ಮೀರುವಂತಿಲ್ಲ. ಅಂದರೆ ಒಟ್ಟು ಸಂಬಳದಲ್ಲಿ ಶೇಕಡ 50ರಷ್ಟು ಭಾಗವು ಮೂಲ ವೇತನ ಆಗಿರಬೇಕು. ಪಿಎಫ್ ಖಾತೆಗೆ ವರ್ಗಾವಣೆ ಆಗುವ ಮೊತ್ತವನ್ನು ನೌಕರರ ಮೂಲವೇತನದ ಆಧಾರದಲ್ಲಿ ಲೆಕ್ಕ ಹಾಕಲಾಗುತ್ತದೆ. 

ಉದ್ಯೋಗಿಯ ವೇತನ ತಿಂಗಳಿಗೆ 50,000 ರೂ. ಆಗಿದ್ದರೆ, ಅವರ ಮೂಲ ವೇತನ 25,000 ರೂ. ಆಗಬಹುದು. ಉಳಿದ 25,000 ರೂ. ಭತ್ಯೆಗಳಿಗೆ ಪರಿಗಣಿಸಲಾಗುವುದು.
ಕೇಂದ್ರ ಸರ್ಕಾರವು ಈಗಾಗಲೇ ನಾಲ್ಕು ಕಾರ್ಮಿಕ ಸಂಹಿತೆಗಳ ಅಡಿಯಲ್ಲಿ ನಿಯಮಗಳನ್ನು ಅಂತಿಮಗೊಳಿಸಿದೆ. ಈಗ ಏನಿದ್ದರೂ ರಾಜ್ಯಗಳು ತಮ್ಮ ಭಾಗದಲ್ಲಿ ನಿಯಮಗಳನ್ನು ರೂಪಿಸಬೇಕಾಗಿದೆ. 2021ರ ಫೆಬ್ರವರಿಯಲ್ಲಿ ಈ ಸಂಹಿತೆಗಳಿಗೆ ಕರಡು ನಿಯಮಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರವು ಪೂರ್ಣಗೊಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments