ಗೋಧಿ ರಫ್ತು ಮಾಡಲಾಗುದಿಲ್ಲ ಭಾರತ

Webdunia
ಶನಿವಾರ, 21 ಮೇ 2022 (07:53 IST)
ಪ್ಯಾರಿಸ್ : ಭಾರತದಲ್ಲಿ ಗೋಧಿ ರಫ್ತು ನಿಷೇಧಿಸಿದ ಬೆನ್ನಲ್ಲೇ ವಿಶ್ವ ಮಾರುಕಟ್ಟೆಯಲ್ಲಿ ಗೋಧಿ ಬೆಲೆಯು ದಾಖಲೆ ಪ್ರಮಾಣದಲ್ಲಿ ಏರಿಕೆ ಆಗಿದೆ.

ಈ ಹಿನ್ನೆಲೆ ಭಾರತ ವಿಶ್ವಸಂಸ್ಥೆ(ಯುಎನ್)ಯಲ್ಲಿ ಮೊದಲ ಬಾರಿಗೆ ಗೋಧಿ ರಫ್ತು ನಿಷೇಧದ ಬಗ್ಗೆ ಮಾತನಾಡಿದೆ. ಮೇ 13ರಂದು ವಿದೇಶಿ ವ್ಯಾಪಾರ ನಿರ್ದೇಶನಾಲಯ(ಡಿಜಿಎಫ್ಟಿ) ಕಳೆದ ವಾರದ ಅಧಿಸೂಚನೆಯಲ್ಲಿ, ಭಾರತವು ಕೇಂದ್ರ ಸರ್ಕಾರ ನೀಡುವ ಅನುಮತಿಯ ಆಧಾರದ ಮೇಲೆ ಗೋಧಿ ರಫ್ತಿಗೆ ಅವಕಾಶ ನೀಡಲಾಗುವುದು ಎಂದು ಹೇಳಿದೆ.

ಈ ಹಿನ್ನೆಲೆ ಮೇ ತಿಂಗಳ ಯುಎನ್ ಸೆಕ್ಯುರಿಟಿ ಕೌನ್ಸಿಲ್ ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ಅವರ ಅಧ್ಯಕ್ಷತೆಯಲ್ಲಿ ನಡೆದ ‘ಜಾಗತಿಕ ಆಹಾರ ಭದ್ರತಾ ಕರೆ ಟು ಆಕ್ಷನ್’ ಕುರಿತು ಸಚಿವರ ಸಭೆ ನಡೆಯಿತು. ಈ ವೇಳೆ ವಿದೇಶಾಂಗ ವ್ಯವಹಾರಗಳ ಸಚಿವ ಮುರಳೀಧರನ್ ಮಾತನಾಡಿದರು. 

ಪಾಶ್ಚಿಮಾತ್ಯ ದೇಶಗಳನ್ನು ಕರೆ ನೀಡಿದ ಭಾರತವು, ಕೋವಿಡ್-19 ಲಸಿಕೆಗಳ ವಿಷಯದಲ್ಲಿ ಭಾರತಕ್ಕೆ ದೊಡ್ಡಮಟ್ಟದಲ್ಲಿ ಖರ್ಚು ಆಗಿದೆ. ಇದನ್ನು ನಾವು ನೋಡಿದ್ದೇವೆ. ಗೋಧಿಯು ಕೋವಿಡ್-19 ಲಸಿಕೆಗಳ ದಾರಿಯಲ್ಲಿ ಹೋಗಬಾರದು. ಕೊರೊನಾ ಲಸಿಕೆಯಂತೆ ಗೋಧಿಯನ್ನು ರಫ್ತು ಮಾಡಲಾಗುವುದಿಲ್ಲ. 

ಏಕೆಂದರೆ ಯುಎನ್ನಲ್ಲಿ ಆಹಾರದ ಬೆಲೆಗಳಲ್ಲಿ ನ್ಯಾಯಸಮ್ಮತವಲ್ಲದೆ ಹೆಚ್ಚಳವಾಗುತ್ತಿದೆ. ಇದರಿಂದ ಆಹಾರ ಸಂಗ್ರಹಣೆಯಲ್ಲಿ ತಾರತಮ್ಯ ಉಂಟಾಗಬಹುದು ಎಂಬ ಬಗ್ಗೆ ಕಳವಳ ಉಂಟಾಗುತ್ತಿದೆ. ಆಹಾರ ಧಾನ್ಯಗಳ ವಿಷಯಕ್ಕೆ ಬಂದಾಗ ನಾವೆಲ್ಲರೂ ಪ್ರವೇಶದ ಪ್ರಾಮುಖ್ಯತೆಯನ್ನು ಸಮರ್ಪಕವಾಗಿ ತಿಳಿದುಕೊಳ್ಳುವುದು ಅವಶ್ಯಕ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ವೇದಿಕೆಯಲ್ಲಿ ಶ್ರೀ ನಾರಾಯಣ ಗುರುಗಳ ಉಪದೇಶದ ಬಗ್ಗೆ ಸಿದ್ದು, ಪಿಣರಾಯಿ ಗುಣಗಾನ

ಕುಡಿದ ಅಮಲಿನಲ್ಲಿ ಬೈಕರ್ ಮಿಡ್‌ನೈಟ್ ಡ್ರಾಮಾಗೆ ಪೊಲೀಸರು ಸುಸ್ತು

ಜೀವಂತವಾಗಿರುವಾಗಲೇ 12ಲಕ್ಷ ವೆಚ್ಚದಲ್ಲಿ ತನ್ನ ಸಮಾಧಿ ನಿರ್ಮಿಸಿದ ವಿಚಿತ್ರ ವ್ಯಕ್ತಿ

ಇಂಧೋರ್‌: ಕಲುಷಿತ ನೀರು ಸೇವಿಸಿ 7 ಜನ ಸಾವು, ಹಲವು ಮಂದಿ ಅಸ್ವಸ್ಥ

ಬಯೋಕಾನ್ ಉದ್ಯೋಗಿ ಅನಂತಕುಮಾರ್ ಸಾವು ಪ್ರಕರಣ, ಕಿರಣ್ ಮಜುಂಧಾರ್‌ ಶಾ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments