Select Your Language

Notifications

webdunia
webdunia
webdunia
webdunia

ಪ್ರಾಣಿ ವಧೆಯಲ್ಲಿ ಮಾನವೀಯತೆ ಎಲ್ಲಿಂದ ಬಂತು: ದೇವನೂರು

ಪ್ರಾಣಿ ವಧೆಯಲ್ಲಿ ಮಾನವೀಯತೆ ಎಲ್ಲಿಂದ ಬಂತು: ದೇವನೂರು
ಮೈಸೂರು , ಸೋಮವಾರ, 4 ಏಪ್ರಿಲ್ 2022 (07:39 IST)
ಮೈಸೂರು : ಧರ್ಮದ ಮುಖವಾಡದಲ್ಲಿ ಅಧರ್ಮ ಕುಣಿದು ಕುಪ್ಪಳಿಸುತ್ತಿದೆ.

ಜನ ಸಮುದಾಯದ ವಿವೇಕ ಕಡಿಮೆಯಾಗುತ್ತಿದೆ. ಪ್ರಾಣಿ ವಧೆ ಮಾಡಿ ತಿನ್ನುವುದರಲ್ಲಿ ಮಾನವೀಯತೆ ಎಲ್ಲಿಂದ ಬಂತು ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಹಲಾಲ್ ವಿವಾದದ ಕುರಿತು ಪ್ರಶ್ನಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಸಾಹಿತಿ, ಕಾನೂನು ಹಾಗೂ ಸುವ್ಯವಸ್ಥೆ ಇದೆ ಎಂದಾದರೆ ಸರ್ಕಾರ ಇಂತಹ ವಿಚಾರವಾಗಿ ಕ್ರಮ ತೆಗೆದುಕೊಳ್ಳಬೇಕಿತ್ತು. ಆದರೆ ಸರ್ಕಾರ ಈ ಬಗ್ಗೆ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು. 

ಸರ್ಕಾರ ಜನ ಸಮುದಾಯವನ್ನು ಒಡೆದು ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ವಿರೋಧ ಪಕ್ಷಗಳು ಇದನ್ನೆಲ್ಲಾ ನೋಡಿಕೊಂಡು ಮಂಕಾಗಿ ಕೂತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಡವರಾಗಿ ಮಾಡುವುದು ಬಿಜೆಪಿ ಸಿದ್ಧಾಂತ : ಜಾರಕಿಹೊಳಿ