Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ನವರೇ ಸಿಎಂ ಆಗಬೇಕಿತ್ತು, ಆದರೆ ಕುಮಾರಸ್ವಾಮಿ ಸಿಎಂ ಆಗಲಿ ಎಂದಿದ್ದು ಯಾರು ಗೊತ್ತಾ?

ಕಾಂಗ್ರೆಸ್ ನವರೇ ಸಿಎಂ ಆಗಬೇಕಿತ್ತು, ಆದರೆ ಕುಮಾರಸ್ವಾಮಿ ಸಿಎಂ ಆಗಲಿ ಎಂದಿದ್ದು ಯಾರು ಗೊತ್ತಾ?
ಬೆಂಗಳೂರು , ಸೋಮವಾರ, 28 ಮೇ 2018 (12:03 IST)
ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ತಯಾರಿ ನಡೆಸುವಾಗ ನೀವೇ ಸಿಎಂ ಆಗಿ ಎಂದು ಕಾಂಗ್ರೆಸ್ ನವರಿಗೆ ಹೇಳಿದ್ದೆವು ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಸಂಪುಟ ರಚನೆ ಬಿಕ್ಕಟ್ಟಿನ ಬಗ್ಗೆ ಮಾತನಾಡಿದ ದೇವೇಗೌಡ ‘ನೀವೇ ಸಿಎಂ ಆಗಿ ಎಂದು ಕಾಂಗ್ರೆಸ್ ನವರಿಗೆ ಹೇಳಿದ್ದೆವು. ಆದರೆ ಕಾಂಗ್ರೆಸ್ ನಾಯಕರೇ ಕುಮಾರಸ್ವಾಮಿ ಸಿಎಂ ಆಗಲಿ ಎಂದಿದ್ದರು’ ಎಂದಿದ್ದಾರೆ.

ಇನ್ನು ರೈತರ ಸಾಲಮನ್ನಾ ವಿಚಾರವಾಗಿ ಕೇವಲ 38 ಶಾಸಕರನ್ನು ಇಟ್ಟುಕೊಂಡು ಕುಮಾರಸ್ವಾಮಿ ಮಾತ್ರ ಹೇಗೆ ತೀರ್ಮಾನ ಮಾಡಲು ಸಾಧ್ಯ? ಬಹುಮತ ಸಿಕ್ಕಿದ್ದರೆ ನಾವೇ ತೀರ್ಮಾನ ಮಾಡುತ್ತಿದ್ದೆವು. ಇದನ್ನೇ ಕುಮಾರಸ್ವಾಮಿಯೂ ಹೇಳಿದ್ದಾರೆ ಎಂದು ದೇವೇಗೌಡರು ಪುತ್ರನ ಪರ ಬ್ಯಾಟಿಂಗ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಾಘಟಬಂಧನ್ ಬೇಕು, ಆದರೆ ರಾಹುಲ್ ಬೇಡವೆಂದ ವಿಪಕ್ಷಗಳು!