Webdunia - Bharat's app for daily news and videos

Install App

ನೂತನ ಸಚಿವರ ಪಟ್ಟಿಯಲ್ಲಿ ಯಾರಿಗೆ ಸ್ಥಾನ?

Webdunia
ಬುಧವಾರ, 4 ಆಗಸ್ಟ್ 2021 (15:28 IST)
ಬೆಂಗಳೂರು(ಆ.04): ಕರ್ನಾಟಕದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರಲು ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್ ಆಗಿದೆ. ಮುಖ್ಯಮಂತ್ರಿ ಬೊಮ್ಮಾಯಿ ದೆಹಲಿಯಲ್ಲಿ ಹೈ ಕಮಾಂಡ್ ಭೇಟಿ ಮಾಡಿ ಸಚಿವರ ಪಟ್ಟಿ ಫೈನಲ್ ಆದ ಬಳಿಕ ನಿನ್ನೆ ರಾತ್ರಿ ಬೆಂಗಳೂರಿಗೆ ವಾಪಸ್ಸಾಗಿದ್ದರು. ಆ ಬಳಿಕ ಸಚಿವ ಸ್ಥಾನ ಫಿಕ್ಸ್ ಆಗಿರುವ ಶಾಸಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಸಿಎಂ ಈವರೆಗೆ ಒಟ್ಟು 26 ಶಾಸಕರಿಗೆ ಕರೆ ಮಾಡಿ ಸಚಿವ ಸ್ಥಾನ ನೀಡಿರುವ ವಿಷಯವನ್ನು ಖಚಿತಪಡಿಸಿದ್ದಾರೆ. ಇಂದು ಮಧ್ಯಾಹ್ನ 2.15ಕ್ಕೆ ರಾಜಭವನದಲ್ಲಿ ನೂತನ ಸಚಿವರ ಪದಗ್ರಹಣ ನಡೆಯಲಿದೆ.
ಸಿಎಂ ನೇರವಾಗಿ ಕರೆ ಮಾಡಿ ಪ್ರಮಾಣ ವಚನಕ್ಕೆ ಆಹ್ವಾನ ನೀಡಿರುವ ಶಾಸಕರ ಪಟ್ಟಿ
1.ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ
2.ಆರ್.ಅಶೋಕ್- ಪದ್ಮನಾಭ ನಗರ
3.ಅರವಿಂದ ಲಿಂಬಾವಳಿ- ಮಹದೇವಪುರ
4.ಡಾ.ಸಿ.ಎನ್.ಅಶ್ವತ್ಥ ನಾರಾಯಣ - ಮಲ್ಲೇಶ್ವರ
5.ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು6.ಉಮೇಶ್ ಕತ್ತಿ- ಹುಕ್ಕೇರಿ
7.ಎಸ್.ಟಿ.ಸೋಮಶೇಖರ್- ಯಶವಂತಪುರ
8.ಡಾ.ಕೆ.ಸುಧಾಕರ್ - ಚಿಕ್ಕಬಳ್ಳಾಪುರ
9.ಬೈರತಿ ಬಸವರಾಜ - ಕೆ ಆರ್ ಪುರಂ
10.ಮುರುಗೇಶ್ ನಿರಾಣಿ - ಬಿಳಿಗಿ
11.ಶಿವರಾಂ ಹೆಬ್ಬಾರ್- ಯಲ್ಲಾಪುರ
12.ಶಶಿಕಲಾ ಜೊಲ್ಲೆ- ನಿಪ್ಪಾಣಿ
13.ಕೆಸಿ ನಾರಾಯಣ್ ಗೌಡ - ಕೆಆರ್ ಪೇಟೆ
14.ಸುನೀಲ್ ಕುಮಾರ್ - ಕಾರ್ಕಳ
15.ಅರಗ ಜ್ಞಾನೇಂದ್ರ - ತೀರ್ಥ ಹಳ್ಳಿ
16.ಗೋವಿಂದ ಕಾರಜೋಳ-ಮುಧೋಳ
17.ಮುನಿರತ್ನ- ಆರ್ ಆರ್ ನಗರ
18.ಎಂ.ಟಿ.ಬಿ ನಾಗರಾಜ್ - ಎಂ ಎಲ್ ಸಿ
19.ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್
20.ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ
21.ಹಾಲಪ್ಪ ಆಚಾರ್ – ಯಲ್ಬುರ್ಗ
22.ಶಂಕರ್ ಪಾಟೀಲ್ ಮುನೇನಕೊಪ್ಪ - ನವಲುಗುಂದ
23.ಕೋಟಾ ಶ್ರೀನಿವಾಸ ಪೂಜಾರಿ - ಎಂ ಎಲ್ ಸಿ
24.ಪ್ರಭು ಚೌವ್ಹಾಣ್ - ಔರಾದ್
25.ವಿ ಸೋಮಣ್ಣ - ಗೋವಿಂದ್ ರಾಜನಗರ
26 ಎಸ್ ಅಂಗಾರ-ಸುಳ್ಯ
27 ಆನಂದ್ ಸಿಂಗ್ - ಹೊಸಪೇಟೆ
28.ಸಿ ಸಿ ಪಾಟೀಲ್ - ನರಗುಂದ
29.ಬಿ.ಸಿ. ನಾಗೇಶ್ - ತಿಪಟೂರು
ಸಚಿವ ಸ್ಥಾನ ಕೈ ತಪ್ಪಿದವರು
•  ಆರ್ ಶಂಕರ್
•  ಸಿಪಿ ಯೋಗೇಶ್ವರ್
•  ಅರವಿಂದ್ ಲಿಂಬಾವಳಿ
    ಶ್ರೀಮಂತ ಪಾಟೀಲ್
•  ಸುರೇಶ್ ಕುಮಾರ್
•  ಜಗದೀಶ್ ಶೆಟ್ಟರ್
•  ಲಕ್ಷಣಸವದಿ
ಈ ಬಾರಿ ಸಂಪುಟದಲ್ಲಿ ಡಿಸಿಎಂ ಅಂದ್ರೆ ಉಪಮುಖ್ಯಮಂತ್ರಿ ಸ್ಥಾನವನ್ನು ಕೈಬಿಡಲಾಗಿದೆ. ಡಿಸಿಎಂ ಹುದ್ದೆಗೆ ಕತ್ತರಿ ಹಾಕಿರುವ ಬಿಜೆಪಿ ಹೈಕಮಾಂಡ್, ಅನಗತ್ಯ ಕಿರಿಕಿರಿಯಿಂದ ತಪ್ಪಿಸಿಕೊಳ್ಳುವ ಪ್ಲಾನ್ ಮಾಡಿದೆ. ಡಿಸಿಎಂ ಹುದ್ದೆ ವಿಚಾರದಲ್ಲಿ ತಾರತಮ್ಯ ಮಾಡುತ್ತಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ, ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಿರಿಯ ಶಾಸಕರ ಅಸಮಾಧಾನಗೊಳ್ಳಲಿದ್ದಾರೆ.  ಡಿಸಿಎಂ ಹುದ್ದೆಯಿಂದ ಯಾವುದೇ ಲಾಭವೂ ಇಲ್ಲ. ಹೆಸರಿಗಷ್ಟೆ ಡಿಸಿಎಂ ಹುದ್ದೆ. ಆದರೆ ಸಾಂವಿಧಾನಕ ಮನ್ನಣೆ ಇಲ್ಲ. ಅನಗತ್ಯ ಗೊಂದಲ ಸೃಷ್ಟಿ ಕಾರಣಕ್ಕೆ ಡಿಸಿಎಂ ಹುದ್ದೆ ರದ್ದು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments