Webdunia - Bharat's app for daily news and videos

Install App

ಈ ಬಾರಿ ಪ್ರಧಾನಮಂತ್ರಿ ಬಾಲಪುರಸ್ಕಾರ ಪ್ರಶಸ್ತಿ ಯಾರಿಗೆ?

Webdunia
ಸೋಮವಾರ, 24 ಜನವರಿ 2022 (09:02 IST)
ಬೆಂಗಳೂರು : ಪ್ರತಿಷ್ಠಿತ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರಕಟವಾಗಿದ್ದು, ಬೆಂಗಳೂರಿನ ಸೈಯದ್ ಫತೀನ್ ಅಹ್ಮದ್ಗೆ ಪ್ರಶಸ್ತಿ ಲಭಿಸಿದೆ.
ಕೇಂದ್ರ ಸರ್ಕಾರ ಪ್ರಕಟಿಸಿದ 29 ಬಾಲಕರ ಪೈಕಿ ಬೆಂಗಳೂರಿನ ಸೈಯದ್ ಫತೀನ್ ಅಹ್ಮದ್ ಆಯ್ಕೆ ಆಗಿದ್ದಾನೆ. ಸಂಗೀತ-ಮನರಂಜನೆ ವಿಭಾಗದಲ್ಲಿ ಫತೀನ್ಗೆ ಪ್ರಶಸ್ತಿ ಸಿಕ್ಕಿದೆ.

ಪಿಯಾನೋದಲ್ಲಿ 16 ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಫತೀನ್ ಪಡೆದಿದ್ದು, ಪ್ರಶಸ್ತಿ ಪುರಸ್ಕೃತ ಮಕ್ಕಳ ಜೊತೆ ಪ್ರಧಾನಿ ಮೋದಿ ಇಂದು ಮಧ್ಯಾಹ್ನ ವೀಡಿಯೋ ಸಂವಾದ ನಡೆಸಲಿದ್ದಾರೆ. ಫತೀನ್ ಜಯನಗರ ನಿವಾಸಿ ವೈದ್ಯೆ ಡಾ.ಅಸ್ಮಾ ರವರ ಪುತ್ರನಾಗಿದ್ದಾನೆ. 

5 ವರ್ಷಕ್ಕಿಂತ ಮೇಲ್ಪಟ್ಟ 18 ವರ್ಷ ಮೀರಿರದ ಬಾಲಕರು ಮತ್ತು ಪ್ರೌಢಾವಸ್ಥೆಯಲ್ಲಿರುವವರ ಅಸಾಧಾರಣ ಸಾಧನೆ ಗುರುತಿಸಿ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ನೀಡಲಾಗುತ್ತದೆ. ನಾವೀನ್ಯತೆ, ಸಮಾಜ ಸೇವೆ, ಪಾಂಡಿತ್ಯ, ಕ್ರೀಡೆ, ಕಲೆ ಮತ್ತು ಸಂಸ್ಕೃತಿ ಮತ್ತು ಶೌರ್ಯ ಎಂಬ ಆರು ವಿಭಾಗಗಳಲ್ಲಿ ಅಸಾಧಾರಣ ಸಾಧನೆಗಾಗಿ ಪ್ರಶಸ್ತಿ ನೀಡಲಾಗುತ್ತದೆ.

ಪ್ರಶಸ್ತಿ 1 ಲಕ್ಷ ರೂ. ನಗದು ನಗದು ಬಹುಮಾನ, ಪದಕ ಮತ್ತು ಪ್ರಮಾಣಪತ್ರ ಒಳಗೊಂಡಿರುತ್ತದೆ. ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿಗಳು ಪ್ರಶಸ್ತಿಯನ್ನು ಪ್ರದಾನ ಮಾಡುತ್ತಾರೆ.

ಪ್ರಧಾನಮಂತ್ರಿ ಅವರು ಪ್ರತಿ ವರ್ಷ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸುತ್ತಾರೆ. ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಸಂದರ್ಭದಲ್ಲಿ ಮತ್ತು ಆಜಾದಿ ಕಾ ಅಮೃತ್ ಮಹೋತ್ಸವದ ಭಾಗವಾಗಿ ಪ್ರಧಾನಮಂತ್ರಿಯವರು 2022ನೇ ಸಾಲಿನ ಬಾಲ ಪುರಸ್ಕಾರ ಪಡೆದವರೊಂದಿಗೆ ಸಂವಾದ ನಡೆಸಲಿದ್ದಾರೆ. ಪ್ರಶಸ್ತಿ ವಿಜೇತರು ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾಗವಹಿಸಲಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments