ಅಟಲ್ ಬಿಹಾರಿ ವಾಜಪೇಯಿ ಅಜಾತ ಶತ್ರು ಎನ್ನುವುದಕ್ಕೆ ಇದೇ ಸಾಕ್ಷಿ!

Webdunia
ಶುಕ್ರವಾರ, 17 ಆಗಸ್ಟ್ 2018 (09:07 IST)
ನವದೆಹಲಿ: ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಬೇರೆ ಬೇರೆ ಪಕ್ಷಗಳ ನಾಯಕರು ರಾಜಕೀಯದ ಹೊರತಾಗಿ ಸ್ನೇಹದಿಂದ ಇರುವುದೇ ಇಲ್ಲ. ಆದರೆ ಅಟಲ್ ಬಿಹಾರಿ ವಾಜಪೇಯಿ ಅವರ ವಿಚಾರದಲ್ಲಿ ಅದು ಸುಳ್ಳು ಎಂದು ಸಾಬೀತಾಗಿದೆ.
 

ನಿನ್ನೆ ವಾಜಪೇಯಿ ಗಂಭೀರ ಎಂಬ ಸುದ್ದಿ ತಿಳಿದಾಗಿನಿಂದ ಬಿಜೆಪಿಯೇತರ ರಾಜಕೀಯ ಪಕ್ಷಗಳ ನಾಯಕರೂ ತಮ್ಮ ವಿರೋಧಿ ಪಕ್ಷದ ನಾಯಕ ಎಂಬುದನ್ನೂ ಮರೆತು ವಾಜಪೇಯಿಗಾಗಿ ಪ್ರಾರ್ಥನೆ ಮಾಡಿದರು. ಅವರನ್ನು ಖುದ್ದಾಗಿ ಭೇಟಿ ಮಾಡಲು ಏಮ್ಸ್ ಗೆ ದೌಡಾಯಿಸಿದರು.

ಇದು ವಾಜಪೇಯಿ ಅಜಾತಶತ್ರು ಎನಿಸಿಕೊಂಡಿದ್ದು ಯಾವ ಕಾರಣಕ್ಕೆ ಎಂದು ಸಾಬೀತುಪಡಿಸಿತು. ನಿನ್ನೆ ಬೆಳಿಗ್ಗೆಯೇ ಕಾಂಗ್ರೆಸ್ ತನ್ನ ಟ್ವಿಟರ್ ನಲ್ಲಿ ವಾಜಪೇಯಿ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಟ್ವೀಟ್ ಮಾಡಿತ್ತು. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿದರು. ದೆಹಲಿ ಸಿಎಂ, ಎಎಪಿ ಮುಖಂಡ ಬಿಜೆಪಿಗೆ ಯಾವತ್ತೂ ಹಿಡಿ ಶಾಪ ಹಾಕುತ್ತಿದ್ದರೂ ಅದೇ ಪಕ್ಷದ ಹಿರಿಯ ಮುಖಂಡನ ಅನಾರೋಗ್ಯ ಸುದ್ದಿ ತಿಳಿದಂತೆ ತಮ್ಮ ಹುಟ್ಟು ಹಬ್ಬ ಆಚರಣೆಯನ್ನೂ ರದ್ದುಗೊಳಿಸಿ ಆಸ್ಪತ್ರೆಗೆ ಭೇಟಿ ನೀಡಿದರು.

ಅಷ್ಟೇ ಅಲ್ಲ, ಸದ್ಯದ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವುದೇ ತಮ್ಮ ಗುರಿ ಎನ್ನುವ ಮಮತಾ ಬ್ಯಾನರ್ಜಿ ಕೂಡಾ ವಾಜಪೇಯಿ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದಾರೆ. ತಮ್ಮ ರಾಜಕೀಯ ಜೀವನದಲ್ಲಿ ಒಮ್ಮೆಯೂ ವೈಯಕ್ತಿಕವಾಗಿ ಯಾರಿಗೂ ನೋವುಂಟು ಮಾಡದ, ಘನತೆಗೆ ಕುತ್ತು ತರುವಂತೆ ನಡೆದುಕೊಳ್ಳದ ಸರಳ ಸಜ್ಜನ ರಾಜಕಾರಣಿ ಬಗ್ಗೆ ಪಕ್ಷ ಬೇಧ ಮರೆತು ರಾಜಕೀಯ ನಾಯಕರು ಕಾಳಜಿ ತೋರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments