Webdunia - Bharat's app for daily news and videos

Install App

ಕೊನೆವರೆಗೂ ಪ್ರಯತ್ನಿಸಿ ಎಂದ ಅಮಿತ್ ಶಾ, ಗರಂ ಆದ ಯಡಿಯೂರಪ್ಪ!

Webdunia
ಶನಿವಾರ, 19 ಮೇ 2018 (14:11 IST)
ಬೆಂಗಳೂರು: ವಿಶ್ವಾಸ ಮತದ ತೂಗುಗತ್ತಿ ನೆತ್ತಿ ಮೇಲೆ ತೂಗಾಡುತ್ತಿದ್ದರೆ ಮೊನ್ನೆಯಷ್ಟೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಎಸ್ ಯಡಿಯೂರಪ್ಪ ಒತ್ತಡದಲ್ಲಿದ್ದಾರೆ.

ಬೇಕಾದಷ್ಟು ಸ್ಥಾನ ಸಿಗಲು ಪರದಾಡುತ್ತಿರುವ ಬಿಜೆಪಿಗೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭರವಸೆಯ ಮಾತುಗಳನ್ನಾಡಿದ್ದಾರೆ. ಕೊನೆಯವರೆಗೆ ಪ್ರಯತ್ನಿಸಿ ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಆದರೆ ಬೇಕಾದಷ್ಟು ಸ್ಥಾನ ಸಿಗದ ಹತಾಶೆಯಲ್ಲಿರುವ ಬಿಎಸ್ ಯಡಿಯೂರಪ್ಪ ಗರಂ ಆಗಿದ್ದಾರೆ. ಕಾಂಗ್ರೆಸ್ ಶಾಸಕ ಬಿಸಿ ಪಾಟೀಲ್ ಗೆ ಸ್ವತಃ ಬಿಎಸ್ ವೈ ಕರೆ ಮಾಡಿ ಆಮಿಷ ಒಡ್ಡುವ ಅಡಿಯೋ ಬಿಡುಗಡೆಯಾಗಿದೆ. ಜತೆಗೆ ಯಲ್ಲಾಪುರ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ಗೆ ಬಿಎಸ್ ವೈ ಪುತ್ರನೇ ಆಮಿಷ ಒಡ್ಡಲು ಕರೆ ಮಾಡಿರುವ ಅಡಿಯೋ ಕೂಡಾ ಬಿಡುಗಡೆಯಾಗಿದೆ. ಹೀಗಾಗಿ ಭಾರೀ ಅಮಿಷವೊಡ್ಡಿ ವಿಪಕ್ಷದ ಶಾಸಕರಿಗೆ ಬಿಜೆಪಿ ಗಾಳ ಹಾಕುತ್ತಿರುವುದು ಸ್ಪಷ್ಟವಾಗಿದೆ. ಹಾಗಿದ್ದರೂ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ಬಿಗು ಬಂದೋಬಸ್ತ್ ನಿಂದಾಗಿ ಬಿಜೆಪಿಗೆ ಅಗತ್ಯ ಶಾಸಕರ ಬೆಂಬಲ ಸಿಗದೇ ಬಿಎಸ್ ವೈ ಹತಾಶೆಗೊಳಗಾಗಿದ್ದಾರೆ ಎನ್ನಲಾಗಿದೆ. ಅಂತೂ ಈ ಸರ್ಕಾರ ಉಳಿಯುತ್ತಾ ಅಳಿಯುತ್ತಾ ಎಂಬ ಪ್ರಶ್ನೆಗೆ ಎರಡೇ ಗಂಟೆಗಳೊಳಗೆ ಉತ್ತರ ಸಿಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments