Publish Date: Wed, 06 Jun 2018 (09:59 IST)
Updated Date: Wed, 06 Jun 2018 (10:01 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಇಂದು ಹೊಸದಾಗಿ 20 ಮಂದಿ ಶಾಸಕರು ಕ್ಯಾಬಿನೆಟ್ ದರ್ಜೆಗೆ ಬಡ್ತಿ ಪಡೆಯುತ್ತಿದ್ದಾರೆ. ಅವರಲ್ಲಿ ನಾನೂ ಒಬ್ಬ ಎಂದು ಶಾಸಕ ಜಮೀರ್ ಅಹಮ್ಮದ್ ಖಚಿತಪಡಿಸಿದ್ದಾರೆ.
ಕಾಂಗ್ರೆಸ್ ನಾಯಕ, ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹಮ್ಮದ್ ನನಗೆ ಸಚಿವ ಸ್ಥಾನ ಪಕ್ಕಾ ಆಗಿದೆ. ಆದರೆ ಯಾವ ಖಾತೆ ಕೊಡುತ್ತಾರೆ ಎಂಬುದು ಗೊತ್ತಾಗಿಲ್ಲ ಎಂದಿದ್ದಾರೆ.
ಚಾಮರಾಜಪೇಟೆ ಶಾಸಕರಾಗಿರುವ ಜಮೀರ್ ಜೆಡಿಎಸ್ ನಿಂದ ಬಂಡಾಯವೆದ್ದು, ಈ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದರು. ಇದೀಗ ಮಂತ್ರಿಯಾಗುತ್ತಿರುವುದು ದೈವೇಚ್ಛೆ ಎಂದು ಅವರು ಹೇಳಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.