Webdunia - Bharat's app for daily news and videos

Install App

ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿದಿದೆ 2.11 ಕೋಟಿ ಲಸಿಕೆ!

Webdunia
ಮಂಗಳವಾರ, 20 ಜುಲೈ 2021 (19:08 IST)
ನವದೆಹಲಿ(ಜು.20): ಕೊರೋನಾ ವೈರಸ್ ವಿರುದ್ಧ ದೇಶದಲ್ಲಿ ಪರಿಣಾಮಕಾರಿಯಾಗಿ ಲಸಿಕಾ ಅಭಿಯಾನ ಆರಂಭಿಸಲಾಗಿದೆ. ಜನವರಿ 16 ರಂದು ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.  ಜೂನ್ 21 ರಿಂದ ದೇಶದ ಎಲ್ಲರಿಗೂ ಉಚಿತ ಲಸಿಕೆ ನೀಡಲಾಗುತ್ತಿದೆ. ಇದರ ಪರಿಣಾಮ ಖಾಸಗಿ ಆಸ್ಪತ್ರೆಗಳಲ್ಲಿನ ಲಸಿಕಾ ಅಭಿಯಾನದ ಬೇಡಿಕೆ ಕಡಿಮೆಯಾಗಿದೆ. ಇದರಿಂದ ದೇಶದ ಖಾಸಗಿ ಆಸ್ಪತ್ರೆಗಳಲ್ಲಿ ಬರೋಬ್ಬರಿ 2.11 ಕೋಟಿ ಲಸಿಕೆ ಬಳಕೆಯಾಗದೇ ಉಳಿದುಕೊಂಡಿದೆ.


•             ಸರ್ಕಾರದಿಂದ ಉಚಿತ ಲಸಿಕೆ ಅಭಿಯಾನದಿಂದ ಖಾಸಗಿ ಆಸ್ಪತ್ರೆಗಿಲ್ಲ ಬೇಡಿಕೆ
•             ಖಾಸಗಿ ಆಸ್ಪತ್ರೆಗಳಲ್ಲಿ 2.11 ಕೋಟಿ ಲಸಿಕೆ ಬಳಕೆಯಾಗದೆ ಉಳಿದಿದೆ
•             ಭಾರತದಲ್ಲಿ 42.15 ಕೋಟಿ ಲಸಿಕೆ ಡೋಸ್ ಹಂಚಿಕೆ

ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆ ಆಗದೆ ಉಳಿದಿರುವ 2.11 ಕೋಟಿಗಿಂತ ಹೆಚ್ಚಿನ ಅಂದರೆ 2,11,93,241 ಡೋಸ್ ಲಸಿಕೆ ಬಳಕೆಗೆ ಲಭ್ಯವಿದೆ.
ದೇಶಾದ್ಯಂತ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ಅಭಿಯಾನದ ವ್ಯಾಪ್ತಿ ಹೆಚ್ಚಿಸಲು ಮತ್ತು ಈ ಕಾರ್ಯಕ್ರಮದ ಗತಿಗೆ ವೇಗ ನೀಡಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಕೋವಿಡ್-19 ಲಸಿಕೆ ಅಭಿಯಾನ ಸಾರ್ವತ್ರೀಕರಣದ ಹೊಸ ಹಂತ 2021 ಜೂನ್ 21ರಿಂದ ಆರಂಭವಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚಿನ ಪ್ರಮಾಣದ ಲಸಿಕೆ ಲಭ್ಯತೆ ಖಾತರಿಪಡಿಸುವ ಮೂಲಕ, ಲಸಿಕೆ ಲಭ್ಯತೆಯ ಮುಂಗಡ ಗೋಚರತೆ ಮತ್ತು ಲಸಿಕೆ ಪೂರೈಕೆಯ ಸರಪಳಿ ಸುಗಮಗೊಳಿಸುವ ಮೂಲಕ ಬೃಹತ್ ಅಭಿಯಾನಕ್ಕೆ ವೇಗ ನೀಡಲಾಗಿದೆ, ಅದರ ವ್ಯಾಪ್ತಿ ಹೆಚ್ಚಿಸಲಾಗಿದೆ.
ದೇಶವ್ಯಾಪಿ ಲಸಿಕೆ ಆಂದೋಲನದ ಭಾಗವಾಗಿ, ಕೇಂದ್ರ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಲಸಿಕೆ ಪೂರೈಸುತ್ತಿದೆ. ಅಭಿಯಾನದ ಸಾರ್ವತ್ರೀಕರಣದ ಹೊಸ ಹಂತದಲ್ಲಿ ಕೇಂದ್ರ ಸರ್ಕಾರವು ದೇಶೀಯ ಲಸಿಕೆ ಉತ್ಪಾದನಾ ಕಂಪನಿಗಳಿಂದ 75% ಲಸಿಕೆಯನ್ನು ಖರೀದಿಸಿ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒದಗಿಸುತ್ತಿದೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 42.15 ಕೋಟಿ ಡೋಸ್ ಗಿಂತ ಹೆಚ್ಚಿನ ಅಂದರೆ 42,15,43,730 ಡೋಸ್ ಲಸಿಕೆ ಪೂರೈಸಲಾಗಿದೆ, ಇನ್ನೂ ಹೆಚ್ಚಿನ 71,40,000 ಡೋಸ್ ಲಸಿಕೆ ಅತಿಶೀಘ್ರವೇ ಪೂರೈಕೆ ಆಗಲಿದೆ. ಇಂದಿನ ಮಾಹಿತಿ ಪ್ರಕಾರ, 42.15 ಕೋಟಿ ಡೋಸ್ ಲಸಿಕೆ ಪೈಕಿ ಸವಕಳಿ ಸೇರಿದಂತೆ 40,03,50,489 ಡೋಸ್ ಲಸಿಕೆ ಬಳಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments