Webdunia - Bharat's app for daily news and videos

Install App

ತುಪ್ಪಾನ್ನ

Webdunia
ಬೇಕಾಗುವ ಸಾಮಾಗ್ರಿಗಳು : ಬಸ್ಮತಿ ಅಕ್ಕಿ, ತುಪ್ಪ, ಗೋಡಂಬಿ, ಒಣದ್ರಾಕ್ಷಿ, ಈರುಳ್ಳಿ, ಬೆಳ್ಳುಳ್ಳಿ, ದಾಲ್ಚೀನಿ, ಏಲಕ್ಕಿ, ಕೊತ್ತಂಬರಿ ಸೊಪ್ಪು, ಉಪ್ಪು

ಪಾಕ ವಿಧಾನ : ಅಕ್ಕಿಯನ್ನು ತೊಳೆದು ಚೆನ್ನಾಗಿ ಅದರ ನೀರನ್ನು ಬತ್ತಿಸಿ. ಅಗಲವಾದ ಪಾತ್ರೆಯಲ್ಲಿ 3 ಚಮಚ ತುಪ್ಪವನ್ನು ಕಾಯಿಸಿ ಅದಕ್ಕೆ ಒಂದು ಇಡೀ ಈರುಳ್ಳಿಯ ಹೋಳುಗಳನ್ನು ಹಾಕಿ ಬೇಯಿಸಿ. ಅದು ಕಂದು ಬಣ್ಣಕ್ಕೆ ತಿರುಗುವಾಗ ಒಲೆಯಿಂದ ತೆಗೆದಿಡಿ. ಸ್ವಲ್ಪ ತುಪ್ಪದಲ್ಲಿ ಗೋಡಂಬಿ ಮತ್ತು ಒಣದ್ರಾಕ್ಷಿಯನ್ನು ಪ್ರತ್ಯೇಕ ಪ್ರತ್ಯೇಕವಾಗಿ ಹುರಿದಿಡಿ. ಇನ್ನು ಸ್ಪಲ್ಪ ತುಪ್ಪದೊಂದಿಗೆ ಶುಂಠಿ, ಬೆಳ್ಳುಳ್ಳಿ, ಏಲಕ್ಕಿ, ದಾಲ್ಚೀನಿಯನ್ನು ಹದವಾಗಿ ಹುರಿಯಿರಿ. ಇನ್ನುಳಿದ ಈರುಳ್ಳಿ ಹೋಳುಗಳನ್ನು ಅದರೊಂದಿಗೆ ಬೆರೆಸಿ ಕೈಬಿಡದಂತೆ ಹುರಿಯುತ್ತಾ ಇರಿ. ಇದಕ್ಕೆ ಅಕ್ಕಿಯನ್ನು ಹಾಕಿ ನೀರನ್ನು ಸೇರಿಸಿ10 ನಿಮಿಷಗಳ ಕಾಲ ಬೇಯಿಸಿ. ನೀರು ಕುದಿಯಲು ಪ್ರಾರಂಭವಾದಾಗ ಉಪ್ಪು ಮತ್ತು ಕೊತ್ತಂಬರಿ ಸೊಪ್ಪನ್ನು ಹಾಕಿ. ಪಾತ್ರೆಯಲ್ಲಿನ ಅಕ್ಕಿ ಬೆಂದು ಅದರ ನೀರು ಪೂರ್ತಿ ಆವಿಯಾದ ನಂತರ ಒಲೆಯಿಂದ ಕೆಳಗಿಳಿಸಿ, ಹುರಿದಿಟ್ಟ ನೀರುಳ್ಳಿ, ಗೋಡಂಬಿ, ಒಣದ್ರಾಕ್ಷಿಗಳನ್ನು ಬೆರೆಸಿ, ಬಿಸಿಯಾಗಿ ಬಡಿಸಿ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉಳಿದ ಅನ್ನ ಮರುದಿನ ಸೇವನೆ ಮಾಡ್ತೀರಾ ಹಾಗಿದ್ದರೆ ಡೇಂಜರ್ ಏನು ನೋಡಿ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮಳೆಗಾಲದಲ್ಲಿ ಸಿಗುವ ಈ ಹಣ್ಣು ಸಿಕ್ಕರೆ ಮಿಸ್ ಮಾಡದೆ ಸೇವನೆ ಮಾಡಿ

ಮಳೆಗಾಲದಲ್ಲಿ ಕಟ್ಟುನಿಟ್ಟಾಗಿ ದೂರವಿಡಲೇ ಬೇಕಾದ ಆಹಾರಗಳು

Show comments