Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 22 ಮಾರ್ಚ್ 2020 (09:09 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಆದರೆ ಉತ್ತಮ ಸಂಬಂಧಗಳನ್ನು ಯೋಚಿಸಿ ಆಯ್ಕೆ ಮಾಡಬೇಕಾಗುತ್ತದೆ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಯಾಗಲಿದೆ. ಆದರೂ ಬಾಕಿ ಹಣ ವಸೂಲಾತಿ ಚಿಂತೆ ಕಾಡಲಿದೆ. ಅನಗತ್ಯ ಚಿಂತೆ ಬೇಡ.

ವೃಷಭ: ನಿರುದ್ಯೋಗಿಗಳು ಬಂದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಮನೆಯಲ್ಲಿ ಸಮಾಧಾನಕರ ವಾತಾವರಣವಿರುವುದು. ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳುವಿರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡುವಾಗ ಎಚ್ಚರಿಕೆ ಅಗತ್ಯ.

ಮಿಥುನ: ಯಾವುದೇ ವಿಚಾರದಲ್ಲೂ ಅನಗತ್ಯ ಚಿಂತೆ ಬೇಡ. ಆದರೆ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ವಾಹನ ಚಾಲನೆ ವೃತ್ತಿಯಲ್ಲಿರುವವರಿಗೆ ಅಪಘಾತದ ಭಯ. ಎಚ್ಚರಿಕೆ ಅಗತ್ಯ.

ಕರ್ಕಟಕ: ವೃತ್ತಿರಂಗದಲ್ಲಿ ಬದಲಾವಣೆಗೆ ಮನಸ್ಸು ಹಾತೊರೆಯುತ್ತದೆ. ಆದರೆ ಸೂಕ್ತ ಅವಕಾಶ ಸಿಗದೇ ನಿರಾಸೆಯಾಗುವುದು. ಕೃಷಿಕರಿಗೆ ಕಠಿಣ ಪರಿಶ್ರಮ ಅಗತ್ಯ. ಹೂಡಿಕೆ ವ್ಯವಹಾರದಲ್ಲಿ ತೊಡಗಿಸಿಕೊಳ್ಳಲು ಕೆಲವು ದಿನ ಕಾಯುವುದು ಉತ್ತಮ.

ಸಿಂಹ: ಯಾವುದೇ ವಿಚಾರದಲ್ಲಿ ನಿರ್ಧಾರ ಮಾಡುವ ಮೊದಲು ಹಿರಿಯರ ಅಭಿಪ್ರಾಯಗಳಿಗೆ ಕಿವಿಗೊಡಿ. ಸಂಗಾತಿಯಿಂದ ಬಂದ ಉಡುಗೊರೆಯನ್ನು ಕಳೆದುಕೊಳ್ಳುವ ಅಪಾಯವಿದೆ. ಮಾತನಾಡುವ ಮೊದಲು ಯೋಚಿಸಿದರೆ ಉತ್ತಮ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಯಾವುದೇ ಕೆಲಸ ಕಾರ್ಯಗಳನ್ನು ಮಾಡುವ ಮೊದಲು ಕುಲದೇವರ ಪ್ರಾರ್ಥನೆ ನಡೆಸಿ ಮುಂದುವರಿಯುವುದು ಉತ್ತಮ. ವೃತ್ತಿರಂಗದಲ್ಲಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಿ. ವ್ಯವಹಾರ ಕ್ಷೇತ್ರದಲ್ಲಿ ಮುನ್ನಡೆಯಿರಲಿದೆ. ಕೌಟುಂಬಿಕವಾಗಿ ಸಂತಸದ ದಿನ.

ತುಲಾ: ಆರ್ಥಿಕವಾಗಿ ಸಕಾಲದಲ್ಲಿ ಧನಾಗಮನವಾಗಲಿರುವುದರಿಂದ ಅಂದುಕೊಂಡ ಕೆಲಸಗಳನ್ನು ನೆರವೇರಿಸುವಿರಿ. ವೃತ್ತಿರಂಗದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಬೆಲೆ ಸಿಗದೇ ನಿರಾಸೆಯಾಗಬಹುದು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ವೃಶ್ಚಿಕ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬಾರದೇ ಬೇಸರವಾಗಬಹುದು. ಸ್ವ ವೃತ್ತಿಯವರಿಗೆ ಮುನ್ನಡೆಯಿರಲಿದೆ. ಅವಿವಾಹಿತರಿಗೆ ಶೀಘ್ರ ವಿವಾಹ ನಿಶ್ಚಯವಾಗಲಿದೆ. ಮನೆಗೆ ಅನಿರೀಕ್ಷಿತವಾಗಿ ಅತಿಥಿಯ ಆಗಮನವಾಗಲಿದೆ.

ಧನು: ನೀವು ನಂಬಿಕೊಂಡಿದ್ದವರ ಬಗ್ಗೆ ಸತ್ಯದರ್ಶನವಾಗಲಿದೆ. ಅನಗತ್ಯವಾಗಿ ನಿಮ್ಮ ಗುಟ್ಟುಗಳನ್ನು ಬೇರೆಯವರ ಎದುರು ಬಿಟ್ಟುಕೊಡಬೇಡಿ. ಸಾಂಸಾರಿಕವಾಗಿ ಹೊಂದಾಣಿಕೆಯ ಮನೋಭಾವವಿದ್ದರೆ ಸಮಾಧಾನವಿರುವುದು. ಕಿರು ಸಂಚಾರ ಮಾಡಬೇಕಾಗುತ್ತದೆ.

ಮಕರ: ಯಾವುದೇ ಕೆಲಸಕ್ಕೂ ನಿಮ್ಮ ಪ್ರಯತ್ನಬಲವೇ ಮುಖ್ಯವಾಗಲಿದೆ. ವೃತ್ತಿರಂಗದಲ್ಲಿ ಬದಲಾವಣೆ ಮನಸ್ಸಿಗೆ ನೆಮ್ಮದಿ ಕೊಡಲಿದೆ. ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಲು ಪ್ರಯತ್ನಿಸಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ.

ಕುಂಭ: ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡಲಿವೆ. ಕಾರ್ಯಕ್ಷೇತ್ರದಲ್ಲಿ ಅಧಿಕ ಓಡಾಟದಿಂದ ದೇಹಾಯಾಸವಾಗಬಹುದು. ಸಂಗಾತಿಯನ್ನು ಸಂಪ್ರೀತಿಗೊಳಿಸಲು ಹೊಸ ವಸ್ತುಗಳ ಖರೀದಿ ಮಾಡಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಆದಾಯಕ್ಕಿಂತ ಖರ್ಚೇ ಹೆಚ್ಚಾಗಿ ಚಿಂತೆಯಾಗಲಿದೆ. ಹಳೆ ವೈಷಮ್ಯ ಮರೆತು ದಾಯಾದಿಗಳೊಂದಿಗೆ ಸ್ನೇಹ ಸಂಬಂಧ ಕಾಯ್ದುಕೊಳ್ಳಲು ಮುಂದಾಗುವಿರಿ. ದುಶ್ಚಟಗಳತ್ತ ಗಮನ ಹರಿಯದಂತೆ ಸಂಯಮವಿರಲಿ. ಮೇಲಧಿಕಾರಿಗಳ ವಿಶ್ವಾಸ ಸಂಪಾದಿಸಲಿದ್ದೀರಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments