Select Your Language

Notifications

webdunia
webdunia
webdunia
webdunia

ಅನಂತ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ಕಣಕ್ಕೆ

ಅನಂತ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ಕಣಕ್ಕೆ
ಬೆಂಗಳೂರು , ಗುರುವಾರ, 27 ಮಾರ್ಚ್ 2014 (18:50 IST)
PR
ಶ್ರೀರಾಮಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಬಿಜೆಪಿ ಹಿರಿಯ ನಾಯಕ ಅನಂತಕುಮಾರ್ ವಿರುದ್ಧ ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ.

ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಲು ಮುತಾಲಿಕ್ ನಿನ್ನೆ ತಮ್ಮ ಬೆಂಬಲಿಗರ ಮೂಲಕ ನಾಮಪತ್ರ ಸಲ್ಲಿಸಿದ್ದರು.

ಮುತಾಲಿಕ್ ನಾಮಪತ್ರದಲ್ಲಿ ದೋಷವಿದೆ ಎಂದು ಬಿಜೆಪಿ ಆರೋಪಿಸಿರುವ ಮಧ್ಯೆಯೇ ನಾಮಪತ್ರವನ್ನು ಚುನಾವಣಾಧಿಕಾರಿ ಸಿಂಧು ಎಂದು ಘೋಷಿಸಿದ್ದಾರೆ.

ಇದರಿಂದಾಗಿ ಲೋಕಸಭಾ ಚುನಾವಣೆಯ ಕಣ ರಂಗೇರಿದೆ. ಮುತಾಲಿಕ್ ತಮ್ಮ ಎದುರಾಳಿ ಅನಂತಕುಮಾರ್ ವಿರುದ್ಧ ಸೇಡು ತೀರಿಸಿಕೊಳ್ಳುವ ಗುರಿ ಹೊಂದಿದ್ದಾರೆ.

ಬಿಜೆಪಿ ಪಕ್ಷದಿಂದ ಹೊರದಬ್ಬಿ ಅವಮಾನಗೊಳಿಸುವ ಹಿಂದೆ ಅನಂತಕುಮಾರ್ ಕೈವಾಡವಿದೆ ಎಂದು ಮುತಾಲಿಕ್ ಆರೋಪಿಸಿದ್ದರು.

Share this Story:

Follow Webdunia kannada