Webdunia - Bharat's app for daily news and videos

Install App

ಚುನಾವಣಾ ಕಣಕ್ಕಿಳಿಯುತ್ತಿಲ್ಲ ಚಿದಂಬರಮ್ , ಪುತ್ರನಿಗೆ ಟಿಕೆಟ್

Webdunia
ಶುಕ್ರವಾರ, 21 ಮಾರ್ಚ್ 2014 (09:15 IST)
PTI
ಕೇಂದ್ರ ಹಣಕಾಸು ಸಚಿವ, ಕಾಂಗ್ರೆಸ್ ನ ಪ್ರಮುಖ ನೇತಾರ ಪಿ. ಚಿದಂಬರಮ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ಅವರು ಸ್ಪರ್ಧಿಸುತ್ತಿದ್ದ ಶಿವಗಂಗಾ ಲೋಕಸಭಾ ಕ್ಷೇತ್ರದಿಂದ ಅವರ ಮಗ ಕಾರ್ತಿ ಕಣಕ್ಕಿಳಿಯಲಿದ್ದಾರೆ.

ತಮ್ಮ ಉಮೇದುವಾರಿಕೆಯನ್ನು ಘೋಷಿಸಿದ ನಂತರ ಮಾತನಾಡಿದ ಕಾರ್ತಿ "ನನ್ನ ತಂದೆ ಒಂಬತ್ತು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಈ ಸಲ ಅವರು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಆದರೆ ಅವರು ರಾಜಕೀಯ ಸನ್ಯಾಸ ತೆಗೆದುಕೊಳ್ಳುತ್ತಿಲ್ಲ" ಎಂದು ಹೇಳಿದರು. ಕಾಂಗ್ರೆಸ್ ಗುರುವಾರ 50 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಪ್ರಮುಖವಾಗಿ ಸಚಿವ ಆಜಾದ್, ಮಣಿ ಶಂಕರ್ ಅಯ್ಯರ್, ದಿಗ್ವಿಜಯ್ ಸಿಂಗ್ ಸಹೋದರ ಲಕ್ಷ್ಮಣ್ ಮತ್ತು ಕಾರ್ತಿ ಹೆಸರಿದೆ.

ದಕ್ಷಿಣ ದೆಹಲಿಯಿಂದ ರಮೇಶಕುಮಾರ ಮತ್ತು ಪಶ್ಚಿಮ ದೆಹಲಿಯಿಂದ ಮಹಾಬಲ ಮಿಶ್ರಾಗೆ ಟಿಕೆಟ್ ಸಿಕ್ಕಿದೆ. ಅವರು ಅದೇ ಕ್ಷೇತ್ರದ ಹಾಲಿ ಸಂಸದರಾಗಿದ್ದಾರೆ.ದೆಹಲಿಯ ಎಲ್ಲ 9 ಕ್ಷೇತ್ರಗಳಿಗೂ ಪಾರ್ಟಿ ಅಭ್ಯರ್ಥಿಯನ್ನು ಘೋಷಿಸಿದೆ.

ಕಾಂಗ್ರಸ್ ಮಹಾಸಚಿವ ದಿಗ್ವಿಜಯ್ ಸಿಂಗ್ ಸಹೋದರ ಲಕ್ಷಣ ಸಿಂಗ್ ಮಧ್ಯಪ್ರದೇಶದ ವಿದಿಶಾದಿಂದ ಆಖಾಡಕ್ಕಿಳಿಯಲಿದ್ದಾರೆ. ಅವರು ಬಿಜೆಪಿ ವರಿಷ್ಠೆ ಸುಶ್ಮಾ ಸ್ವರಾಜ್ ಅವರ ಪ್ರತಿದ್ವಂದ್ವಿಯಾಗಲಿದ್ದಾರೆ.

ಮಾಜಿ ಕೇಂದ್ರಸಚಿವ ಮಣಿಶಂಕರ್ ಅಯ್ಯರ್ ತಮ್ಮ ಪಾರಂಪರಿಕ ಕ್ಷೇತ್ರ ಮೈಯಲಾದುತುರಿಯಿಂದ ಸ್ಪರ್ಧಿಸಲಿದ್ದಾರೆ.

ಇಲ್ಲಿಯವರೆಗೆ ಕಾಂಗ್ರೆಸ್ 364 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments