Webdunia - Bharat's app for daily news and videos

Install App

"ಚುನಾವಣೆ ಮುಗಿಯಲಿ, ಯಾರು ತುಂಡು ತುಂಡಾಗಿ ಕತ್ತರಿಸುತ್ತಾರೆ" ನೋಡೋಣ ಎಂದ ರಾಜೇ ಬಂಧನಕ್ಕೆ ಕಾಂಗ್ರೆಸ್ ಆಗ್ರಹ

Webdunia
ಮಂಗಳವಾರ, 8 ಏಪ್ರಿಲ್ 2014 (17:51 IST)
ಭಾನುವಾರ ಚುನಾವಣಾ ಆಯೋಗದ ಮುಂದೆ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾದ ನರೇಂದ್ರ ಮೋದಿ ಅವರ ಆಪ್ತ ಅಮಿತ್ ಶಾ ಬಂಧನದ ಬೇಡಿಕೆಯನ್ನಿಟ್ಟಿದ್ದ ಕಾಂಗ್ರೆಸ್ ಇಂದು, ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇಯವರನ್ನು ಬಂಧಿಸುವಂತೆ ಆಗ್ರಹಿಸಿದೆ.
PTI

ವರದಿಗಳ ಪ್ರಕಾರ, ಚುನಾವಣಾ ಪ್ರಚಾರದ ಸಮಯದಲ್ಲಿ ರಾಜೇ "ಬಹಿರಂಗ ಬೆದರಿಕೆ" ಯನ್ನೊಡ್ಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಅವರನ್ನು ಬಂಧಿಸುವಂತೆ ಆಯೋಗಕ್ಕೆ ಮನವಿ ಮಾಡಿದೆ.

ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವ ರಾಜೇ ಮೇಲೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯ ಚುನಾವಣಾ ಅಧಿಕಾರಿ ವಿ. ಎಸ್. ಸಂಪತ್ ಅವರಿಗೆ ಕಾಂಗ್ರೆಸ್ ಪತ್ರವನ್ನು ರವಾನಿಸಿದೆ.

ಜೈಪುರದಲ್ಲಿ, ಆಮ್ ಆದ್ಮಿ ಪಕ್ಷ ಕೂಡ ರಾಜೇ "ಪ್ರಚೋದನಕಾರಿ" ಭಾಷಣ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಆಯೋಗಕ್ಕೆ ಒತ್ತಾಯಿಸಿದೆ.

“ಚುನಾವಣೆ ಮುಗಿಯಲಿ, ಯಾರು ಯಾರನ್ನು ತುಂಡು ತುಂಡಾಗಿ ಕತ್ತರಿಸುತ್ತಾರೆ ಎಂದು ನಾವು ನೋಡೋಣ" ಎಂದು ರಾಜೇ ಹೇಳಿದ್ದಾರೆ ಎಂದು ಕಾಂಗ್ರೆಸ್ಸಿನ ಕಾನೂನು ವಿಭಾಗದ ಕಾರ್ಯದರ್ಶಿ ಕೆ.ಸಿ.ಮಿತ್ತಲ್ ಆಯೋಗದ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಹರಾಣಾಪುರದ ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್, ಮೋದಿಯನ್ನು ತುಂಡುಗಳಾಗಿ ಕೊಚ್ಚಿ ಹಾಕಬೇಕು ಎಂದು ಬೆದರಿಕೆ ಹಾಕಿದ್ದಕ್ಕೆ ಪ್ರತಿಕ್ರಿಯೆಯಾಗಿ ರಾಜೇ ಈ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments