Webdunia - Bharat's app for daily news and videos

Install App

ನರೇಂದ್ರ ಮೋದಿ ಬಿಜೆಪಿಯ ಸ್ವಯಂ ನಾಶ ಮಂತ್ರ: ಕಾಂಗ್ರೆಸ್

Webdunia
ಮಂಗಳವಾರ, 25 ಮಾರ್ಚ್ 2014 (13:21 IST)
ಭಾರತೀಯ ಜನತಾ ಪಕ್ಷದ ಪ್ರಧಾನಿ ಸ್ಥಾನದ ಅಭ್ಯರ್ಥಿ ನರೇಂದ್ರ ಮೋದಿ ಬಿಜೆಪಿಯ ಆತ್ಮ ಹಾನಿ ಮಂತ್ರ ಎಂದು ಕಾಂಗ್ರೆಸ್ ಟೀಕಿಸಿದೆ.
PTI

ಮೋದಿ ಬಿಜೆಪಿಯ ಸ್ವಯಂ ನಾಶ ಮಂತ್ರ ಎನ್ನುವುದಕ್ಕೆ, ಕಳೆದ ಕೆಲವು ದಿನಗಳಿಂದ ಬಿಜೆಪಿಯಲ್ಲಿ ನಡೆಯುತ್ತಿರುವ ಅಂತರಿಕ ಕಚ್ಚಾಟ ಮತ್ತು ಭಿನ್ನಾಭಿಪ್ರಾಯಗಳೇ ಸಾಕ್ಷಿಯಾಗಿವೆ. ಇದು ಮೋದಿಯ ವಿನಾಶವನ್ನು ಎತ್ತಿ ತೋರಿಸುತ್ತವೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ಅಭಿಷೇಕ್ ಮನು ಸಿಂಗ್ವಿ ಟ್ವಿಟ್ ಮಾಡಿದ್ದಾರೆ.

ಪಕ್ಷದ ನಾಯಕ ಜಸ್ವಂತ್ ಸಿಂಗ್‌ಗೆ ರಾಜಸ್ಥಾನದ ಬಾರ್ಮರ್ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ನಂತರ ಸ್ವತಂತ್ರ ಅಭ್ಯರ್ಥಿಯಾಗಿ ತನ್ನ ನಾಮಪತ್ರ ಸಲ್ಲಿಸಿದ ಘಟನೆಯನ್ನು ಪರಿಗಣನೆಗೆ ತೆಗೆದುಕೊಂಡಲ್ಲಿ, ಭಾರತೀಯ ಜನತಾ ಪಾರ್ಟಿ ಒಳಗೆ ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಅಸಮ್ಮತಿ ಕುದಿಯುತ್ತಿದೆ ಎಂದು ಸಿಂಗ್ವಿ ಹೇಳಿದ್ದಾರೆ.

" ಎಲ್.ಕೆ.ಆಡ್ವಾಣಿ, ಜಸ್ವಂತ್ ಸಿಂಗ್, ಹರಿಣ್ ಪಾಠಕ್, ರಾಣಾ (ಲಾಲ್ ಮುನಿ) ಚೌಬೇ, ಲಾಲಜೀ ಟಂಡನ್‌ರಂತಹ ಬಿಜೆಪಿ ನಾಯಕರೇ ಮೋದಿಯನ್ನು ನಂಬುತ್ತಿಲ್ಲ. ಮತ್ತೆ ದೇಶ ಹೇಗೆ ನಂಬಲು ಸಾಧ್ಯ? ನಿಮ್ಮವರೇ ನಿಮ್ಮವರಾಗಿಲ್ಲ, ಮತ್ತೆ ದೇಶ ಹೇಗೆ ನಿಮ್ಮದಾಗಲು ಸಾಧ್ಯ" ಎಂದು ಸಿಂಗ್ವಿ ಲೇವಡಿ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments