ಲೋಕಸಭೆ ಚುನಾವಣೆ ಮುಂದಿರುವಂತೆ ಚುನಾವಣೆ ನೀತಿಗಳನ್ನು ಉಲ್ಲಂಘಿಸಿದ ಶಹರಾನ್ಪುರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯನ್ನು ತುಂಡು ತುಂಡಾಗಿ ಕತ್ತರಿಸುವುದಾಗಿ ಹೇಳಿಕೆ ನೀಡಿ ಬಾರಿ ಕೋಲಾಹಲಕ್ಕೆ ಕಾರಣವಾಗಿದ್ದಾರೆ.
ಸಾರ್ವಜನಿಕ ಸಭೆಯಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದ ಮಸೂದ್, ನರೇಂದ್ರ ಮೋದಿಯನ್ನು ತುಂಡು ತುಂಡಾಗಿ ಕತ್ತರಿಸುವುದಾಗಿ ಹೇಳಿಕೆ ನೀಡಿ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ಚುನಾವಣೆ ಆಯೋಗ ಭಾಷಣ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಆದೇಶ ನೀಡಿದೆ.
ಗುಜರಾತ್ ರಾಜ್ಯದಲ್ಲಿ ಕೇವಲ ಶೇ.4 ರಷ್ಟು ಮುಸ್ಲಿಂ ಸಮುದಾಯವಿದೆ. ಆದರೆ, ಉತ್ತರಪ್ರದೇಶದಲ್ಲಿ ಶೇ.22 ರಷ್ಟು ಮುಸ್ಲಿಂ ಸಮುದಾಯವಿದೆ.ಮೋದಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್ ವಾಗ್ದಾಳಿ ನಡೆಸಿದ್ದಾರೆ.