Webdunia - Bharat's app for daily news and videos

Install App

ಪ್ರಚಾರದ ವೇಳೆ ಕೇಜ್ರಿವಾಲ್‌ಗೆ ಕಪಾಳಮೋಕ್ಷ ಮಾಡಲು ಯತ್ನಿಸಿದ ಅನಾಮಿಕ ವ್ಯಕ್ತಿ

Webdunia
ಶುಕ್ರವಾರ, 4 ಏಪ್ರಿಲ್ 2014 (17:29 IST)
ದಕ್ಷಿಣ ದೆಹಲಿಯ ದಕ್ಷಿಣಾಪುರದಲ್ಲಿ ಪ್ರಚಾರ ಮಾಡುತ್ತಿದ್ದ ವೇಳೆ ಆಮ್ ಆದ್ಮಿ ಪಕ್ಷದ ನಾಯಕ ಕೇಜ್ರಿವಾಲ್ ಮೇಲೆ ಅನಾಮಿಕ ವ್ಯಕ್ತಿಯೊಬ್ಬ ದಾಳಿ ನಡೆಸಿದ್ದಾನೆ. ಆತನನ್ನು ಪೋಲಿಸರು ತಕ್ಷಣ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
PTI

ಆಪ್ ನಾಯಕ ತೆರೆದ ವಾಹನದಲ್ಲಿ ಕುಳಿತು ಪ್ರಚಾರ ನಡೆಸುತ್ತಿದ್ದರು. ಅವರು ತಮ್ಮ ಬೆಂಬಲಿಗರೊಬ್ಬರ ಜತೆ ಕೈ ಮಿಲಾಯಿಸುತ್ತಿದ್ದ ವೇಳೆ ಅಚಾನಕ್ ಆಗಿ ದಾಳಿ ನಡೆಸಿದ ವ್ಯಕ್ತಿಯೊಬ್ಬ ಅವರ ಬೆನ್ನಿಗೆ ಗುದ್ದಿ, ಕಪಾಳ ಮೋಕ್ಷ ಮಾಡಲು ಯತ್ನಿಸಿದ್ದಾನೆ. ಕೂಡಲೇ ಆತನನ್ನು ಹಿಡಿದುಕೊಂಡ ಆಪ್ ಕಾರ್ಯಕರ್ತರು ಚೆನ್ನಾಗಿ ಥಳಿಸಿ ಪೋಲಿಸರ ವಶಕ್ಕೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಕೇಜ್ರಿವಾಲ್ "ಘಟನೆಯ ಹಿಂದೆ ಬಿಜೆಪಿಯ ಕೈವಾಡವಿದೆ" ಎಂದು ಆರೋಪಿಸಿದ್ದಾರೆ.

" ಕೆಲವರು ಪ್ರಧಾನಮಂತ್ರಿ ಆಗುವುದಕ್ಕಾಗಿ ಏನನ್ನು ಬೇಕಾದರೂ ಮಾಡಲು ತಯಾರಾಗುತ್ತಾರೆ. ನಮ್ಮ ಧರ್ಮ ನಮಗೆ ಅಹಿಂಸೆಯ ಬಗ್ಗೆ ಹೇಳುತ್ತದೆ. ನಮ್ಮನ್ನು ಕೊಂದರೂ ಸಹ ನಾವು ಯಾರ ಮೇಲೆ ಕೈ ಎತ್ತುವುದಿಲ್ಲ" ಎಂದು ಅವರು ಹೇಳಿದ್ದಾರೆ.

" ಯಾವುದೇ ತರಹದ ಹಿಂಸೆಯಲ್ಲಿ ಸಾಮೀಲಾಗಬೇಡಿ, ಶಾಂತಿಯನ್ನು ಕಾಪಾಡಿ" ಎಂದು ಅವರು ತಮ್ಮ ಬೆಂಬಲಿಗರಲ್ಲಿ ಮನವಿ ಮಾಡಿದರು.

ಇದಕ್ಕೂ ಮೊದಲು ಕೂಡ ಕೇಜ್ರಿವಾಲ್ ಮೇಲೆ ಅನೇಕ ಬಾರಿ ದಾಳಿ ನಡೆದಿತ್ತು. ಮಾರ್ಚ್ 28 ರಂದು ಹರಿಯಾಣಾದಲ್ಲಿ ಅವರ ಮೇಲೆ ದಾಳಿ ಮಾಡಿದ್ದ ವ್ಯಕ್ತಿಯೊಬ್ಬ ತಾನು ಅಣ್ಣಾ ಹಜಾರೆಯ ಸಮರ್ಥಕನೆಂದು ಹೇಳಿಕೊಂಡಿದ್ದ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments