Webdunia - Bharat's app for daily news and videos

Install App

ಭೋಪಾಲ್ ದಿಂದ ಕಣಕ್ಕಿಳಿಯಲು ಆಡ್ವಾಣಿಯನ್ನು ಆಹ್ವಾನಿಸಿದ ಕೈಲಾಶ ಜೋಶಿ

Webdunia
ಶುಕ್ರವಾರ, 14 ಮಾರ್ಚ್ 2014 (17:35 IST)
PR
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಸಂಸದ ಕೈಲಾಶ ಜೋಶಿ ತಮ್ಮ ಕ್ಷೇತ್ರವನ್ನು ಲಾಲಕೃಷ್ಣ ಅಡ್ವಾಣಿಗೆ ಬಿಟ್ಟು ಕೊಡುವುದಾಗಿ ಹೇಳಿ ಎಲ್ಲರನ್ನೂ ದಿಗ್ಭ್ರಮೆಗೊಳಗಾಗುವಂತೆ ಮಾಡಿದ್ದಾರೆ.

"3 ದಿನಗಳ ಹಿಂದೆ ಅಡ್ವಾಣಿಯವರನ್ನು ಭೇಟಿಯಾಗಿ ಭೋಪಾಲ್ ನಿಂದ ಚುನಾವಣಾ ಕಣಕ್ಕೆ ಇಳಿಯಲು ಆಮಂತ್ರಣ ನೀಡಿದ್ದೇನೆ ಎಂದು ಕೈಲಾಶ ಜೋಶಿ "ಹೇಳಿದ್ದಾರೆ. ಜೋಶಿ ತಾನು ಆ ಕ್ಷೇತ್ರದಿಂದ ಸ್ಪರ್ಧಿಸಲಾರೆ ಎಂದು ಈಗಾಗಲೇ ಘೋಷಿಸಿದ್ದಾರೆ.

ತಮ್ಮ ಪ್ರಸ್ತಾವನೆಗೆ ಅವರ ಪ್ರತಿಕ್ರಿಯೆ ಏನಿತ್ತು ಎಂದು ಜೋಶಿಯವರನ್ನು ಕೇಳಿದಾಗ "ಆ ಬಗ್ಗೆ ವಿಚಾರ ಮಾಡುತ್ತೇನೆ ಎಂದು ಹೇಳಿದ್ದಾರೆ" ಎಂದಿದ್ದಾರೆ ಎಂದು ಅವರು ಉತ್ತರಿಸಿದರು.

ಪಕ್ಷದಲ್ಲೂ ಅಡ್ವಾಣಿ ಈ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ಊಹಾಪೋಹಗಳಿವೆ. ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಪ್ರದೇಶ ಚುನಾವಣಾ ಸಮಿತಿ ಭೋಪಾಲ್ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯನ್ನು ಕೇಂದ್ರ ಚುನಾವಣಾ ಸಮಿತಿಗೆ ಸೇರುತ್ತದೆ ಎಂದು ಹೇಳಿದ್ದರಿಂದ ಈ ಊಹಾಪೋಹಕ್ಕೆ ಪುಷ್ಠಿ ನೀಡಿದಂತಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments