Webdunia - Bharat's app for daily news and videos

Install App

ವಾರಣಾಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿಯಲಿದ್ದಾರೆ ದಿಗ್ವಿಜಯ್ ಸಿಂಗ್!

Webdunia
ಗುರುವಾರ, 20 ಮಾರ್ಚ್ 2014 (11:51 IST)
PTI
ವಾರಣಾಸಿಯಿಂದ ಸ್ಪರ್ಧಿಸುತ್ತಿರುವ ಭಾರತ ಜನತಾ ಪಕ್ಷದ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧ ಬಲಿಷ್ಠ ಉಮೇದುವಾರನನ್ನು ಕಣಕ್ಕಿಳಿಸಲು ಕಾಂಗ್ರೆಸ್ ತಯಾರಿ ನಡೆಸುತ್ತಿದೆ. ಮೋದಿಯ ಗೆಲುವನ್ನು ಪ್ರಯಾಸದಾಯಕವಾಗಿಸಲು ಅದು ಪಕ್ಷದ ಮಹಾಸಚಿವ ದಿಗ್ವಿಜಯ್ ಸಿಂಗ್ ರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮೂಲಗಳ ಪ್ರಕಾರ ಕಾಂಗ್ರೆಸ್ಸಿನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಮೋದಿಗೆ ಎದುರಾಳಿಯಾಗಿ ಆಖಾಡಕ್ಕಿಳಿಯಲು ತಯಾರಾಗಿದ್ದಾರೆ. ಪಕ್ಷದ ವಾರಣಾಸಿ ಘಟಕ ಅವರ ಹೆಸರನ್ನು ಸಲಹೆ ಮಾಡಿದೆ. ಬಹುಶಃ ಶುಕ್ರವಾರ ಅವರ ಹೆಸರನ್ನು ಘೋಷಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಆಮ್ ಆದ್ಮಿ ಪಕ್ಷ ಕೂಡ ಕೇಜ್ರಿವಾಲ್ ರನ್ನು ಇಲ್ಲಿಯ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ನಿರ್ಧರಿಸಿದೆ. ಆದರೆ ಕೇಜ್ರಿವಾಲ್ ತಾನು 25 ಮಾರ್ಚ್ ಗೆ ವಾರಣಾಸಿಯ ಜನರ ಅಭಿಪ್ರಾಯ ಕೇಳಿ ತಮ್ಮ ಪಕ್ಷದ ಅಭ್ಯರ್ಥಿ ಯಾರೆಂದು ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ.

ತಾವು ಬೇರೆ ಪಕ್ಷದ ಜತೆ ಸೇರಿ ಅಭ್ಯರ್ಥಿಯನ್ನು ನಿರ್ಧರಿಸುವುದಿಲ್ಲ, ಜತೆಗೆ ದುರ್ಬಲ ಅಭ್ಯರ್ಥಿಯನ್ನು ಸಹ ಕಣಕ್ಕಿಳಿಸುವುದಿಲ್ಲ ಎಂದು ಕಾಂಗ್ರೆಸ್ ಈ ಮೊದಲೇ ಹೇಳಿಕೊಂಡಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments