Webdunia - Bharat's app for daily news and videos

Install App

ಸ್ಯಾಂಡಲ್‌ವುಡ್ ಮುಂದಾಳತ್ವಕ್ಕೆ ಅಂಬರೀಷ್ ಗುಡ್ ಬೈ

Webdunia
SUJENDRA
ವಯಸ್ಸು ಹೆಚ್ಚಾಗುತ್ತಿರುವ ಕಾರಣದಿಂದ, ಕನ್ನಡ ಚಲನಚಿತ್ರ ಕಲಾವಿದರ ಸಂಘವನ್ನೇ ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಕನ್ನಡ ಚಿತ್ರರಂಗದ ಮುಂದಾಳತ್ವ ವಹಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ ರೆಬೆಲ್ ಸ್ಟಾರ್ ಅಂಬರೀಷ್.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ನಂತರ ಕನ್ನಡ ಚಿತ್ರರಂಗ ಉತ್ತಮ ಮುಂದಾಳತ್ವವಿಲ್ಲದೆ ಸೊರಗುತ್ತಿದೆ. ಈ ನಿಟ್ಟಿನಲ್ಲಿ ನೀವ್ಯಾಕೆ ಜವಾಬ್ದಾರಿ ವಹಿಸಿಕೊಳ್ಳಬಾರದು ಎಂದು ಸಭಿಕರು ಕೇಳಿದ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದ್ದಾರೆ.

ಡಾ.ರಾಜ್ ನಂತರ ಕನ್ನಡ ಚಿತ್ರರಂಗಕ್ಕೆ ಉತ್ತಮ ನಾಯಕತ್ವವಿಲ್ಲ ಎಂದು ಮೇಲ್ನೋಟಕ್ಕೆ ಹೇಳಬಹುದಾದರೂ, ಸ್ಯಾಂಡಲ್‌ವುಡ್‌ನ ರಂಪಾಟಗಳು ಬೀದಿಗಿಳಿದು ಮೂರಾಬಟ್ಟೆಯಾಗುವ ಮೊದಲು ಸ್ವತಃ ಅಂಬರೀಷ್ ಮುಂದೆ ನಿಂತು ಎಲ್ಲರನ್ನೂ ಸಮಾಧಾನ ಮಾಡಿದ ಉದಾಹರಣೆಗಳು ಸಾಕಷ್ಟಿವೆ.

ಸ್ಯಾಂಡಲ್‌ವುಡ್‌ನಲ್ಲಿ ಕಲಹಗಳು ಹೊಸದಲ್ಲ. ಸಿನಿಮಾ ರಂಗದಲ್ಲಿ ಸಾಕಷ್ಟು ಹಣಕಾಸು ಮತ್ತು ಪ್ರತಿಷ್ಠೆ ವಿಷಯಗಳು ಹರಿದಾಡುವುದರಿಂದ ಒಂದಲ್ಲಾ ಒಂದು ರೀತಿಯಲ್ಲಿ ಕಲಾವಿದರು ಮುನಿಸಿಕೊಳ್ಳುವುದು ಮಾಮೂಲಿ. ಆದರೆ ಅವುಗಳನ್ನೆಲ್ಲಾ ಯಾರಿಗೂ ಭಿನ್ನಾಭಿಪ್ರಾಯವಾಗದ ರೀತಿಯಲ್ಲಿ ರಾಜಿ ಮಾಡಿ ಕಲಿಸುವ ಮೂಲಕ ರೆಬೆಲ್ ಸ್ಟಾರ್ ಅಂಬರೀಷ್ ಇದುವರೆಗೂ ಸ್ಯಾಂಡಲ್‌ವುಡ್‌ಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎನ್ನುತ್ತಿದೆ ಗಾಂಧಿನಗರ.

ಆದರೆ ಇನ್ನು ಮುಂದೆ ಸ್ಯಾಂಡಲ್‌ವುಡ್‌ನಲ್ಲಿ ಎಲ್ಲರೂ ಒಗ್ಗಟ್ಟಾಗಿ ಇರುತ್ತಾರಾ ಅಥವಾ ಒಂದೇ ಕುಟುಂಬದಂತೆ ಇದ್ದೇವೆ ಎಂದು ಹೇಳಿ, ಹೇಳೊರಿಲ್ಲ ಕೇಳೋರಿಲ್ಲ ನಂಗೆ ನಾನೇ ರಾಜನು ಎಂದು ಬೇರೆ ಬೇರೆಯಾಗುತ್ತಾರೊ ಕಾದುನೋಡಬೇಕಿದೆ.

ವೆಬ್‌ದುನಿಯಾ ಕನ್ನಡ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments