Webdunia - Bharat's app for daily news and videos

Install App

ಕಾದಿಹಳು ಬರಗೂರರ 'ಶಬರಿ'!

Webdunia
MOKSHA
ಶಬರಿ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದೆ. ಇದು ಡಾ.ಬರಗೂರು ರಾಮಚಂದ್ರಪ್ಪನವರ ಕಾದಂಬರಿಯಾಧಾರಿತ ಚಿತ್ರ. ಈ ಕಾಲದ ಶಬರಿಯ ಕಥಾವಸ್ತುವನ್ನು ಹೊಂದಿರುವ ಈ ಚಿತ್ರ ಶಬರಿಯನ್ನು ಹೊಸ ನೆಲೆಯಲ್ಲಿ ವ್ಯಾಖ್ಯಾನಿಸುತ್ತೆ ಎನ್ನುತ್ತಾರೆ ನಿರ್ದೇಶಕ ಬರಗೂರು.

ಕಾಯುವುದು ಎಂದರೆ ಕುದಿಯುವುದು ಮತ್ತು ನಿರೀಕ್ಷಿಸುವುದು ಎಂಬ ಅರ್ಥದ ನೆಲೆಯಲ್ಲಿ, ಬದಲಾವಣೆಗಾಗಿ ಕಾಯುವ ಬುಡಕಟ್ಟನ್ನು ಕೇಂದ್ರವಾಗಿಟ್ಟುಕೊಂಡಿರುವ ಈ ಚಿತ್ರದಲ್ಲಿ ನೈಜತೆ ಮತ್ತು ಸಾಂಕೇತಿಕತೆಗೆ ಪ್ರಾಮುಖ್ಯತೆ ನೀಡಲಾಗಿದೆ ಎನ್ನುವುದು ಅವರ ಅನಿಸಿಕೆ.

ಬುಡಕಟ್ಟಿನ ಹೆಣ್ಣು ಮಕ್ಕಳು ಮದುವೆಯಾದ ಮೊದಲ ರಾತ್ರಿ ಊರಿನ ಗುಡಿಯಲ್ಲಿ ದೇವರೊಂದಿಗೆ ಕಳೆಯಬೇಕೆಂಬ ನಂಬಿಕೆಯನ್ನು ಬಯಲು ಮಾಡಲು ಹೋದ ಚಂದ್ರ ಎಂಬ ಯುವಕ ಸಾಯುತ್ತಾನೆ. ಆನಂತರ ಚಂದ್ರನ ಗೆಳೆಯ ಸೂರ್ಯ ಈ ನಿಗೂಢವನ್ನು ಭೇದಿಸುವ ಪ್ರಯತ್ನದ ಜೊತೆಗೆ ಜಾಗೃತಿ ಮೂಡಿಸುತ್ತಾನೆ. ಆದರೆ ಸೂರ್ಯನ ಸುತ್ತ ನಿಗೂಢತೆ ಆವರಿಸಿಕೊಂಡು ಆತ ಯಾರೆಂದು ತಿಳಿಯುವ ಮೊದಲೇ ಪೋಲಿಸರಿಂದ ಬಂಧನಕ್ಕೊಳಗಾಗುತ್ತಾನೆ. ಮುಂದೆನಾಗುತ್ತೆ ಅನ್ನೋದಕ್ಕೆ ಚಿತ್ರಮಂದಿರಕ್ಕೇ ಹೋಗಬೇಕು.

ಶಬರಿ ಸದ್ಯದಲ್ಲೇ ಚಿತ್ರಮಂದಿರಕ್ಕೆ ಬರಲಿದ್ದಾಳೆ. ಸಂಭಾಷಣೆ, ಗೀತ ರಚನೆ, ನಿರ್ದೇಶನ ಎಲ್ಲವೂ ಬರಗೂರದ್ದಾದರೆ, ಈ ಚಿತ್ರಕ್ಕೆ ವಿ. ಮನೋಹರ್ ಸಂಗೀತ ನೀಡಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments