Webdunia - Bharat's app for daily news and videos

Install App

ಕನ್ನಡದ ವಿವಾದ ಮೈಮೇಲೆಳೆದುಕೊಂಡ ಕಿರುತೆರೆ ನಟ ಚಂದು ಗೌಡ

Webdunia
ಶುಕ್ರವಾರ, 4 ಜೂನ್ 2021 (09:37 IST)
ಬೆಂಗಳೂರು: ಒಂದೆಡೆ ಗೂಗಲ್ ನಲ್ಲಿ ಕನ್ನಡ ಭಾಷೆಗೆ ಅವಮಾನವಾಗಿದ್ದರೆ ಇನ್ನೊಂದೆಡೆ ಕಿರುತೆರೆ ನಟ, ಲಕ್ಷ್ಮೀ ಬಾರಮ್ಮಾ ಧಾರವಾಹಿ ಖ್ಯಾತಿಯ ನಟ ಚಂದು ಗೌಡ ಮತ್ತು ನಟಿ ಆಶಿಕಾ ಪಡುಕೋಣೆ ಕನ್ನಡದ ಬಗ್ಗೆ ತಪ್ಪಾಗಿ ಮಾತನಾಡಿ ವಿವಾದ ಮೈಮೇಲೆಳೆದುಕೊಂಡಿದ್ದಾರೆ.


ತೆಲುಗು ಕಿರುತೆರೆಯಲ್ಲಿ ಬ್ಯುಸಿಯಾಗಿರುವ ಇಬ್ಬರೂ ಕಲಾವಿದರು ಅಲ್ಲಿನ ಸಂದರ್ಶನವೊಂದರಲ್ಲಿ ಬೆಂಗಳೂರಿನಲ್ಲಿ ಇರುವ ಶೇ.70 ರಿಂದ 80 ಮಂದಿ ತೆಲುಗು ಮಾತನಾಡುವವರು’ ಎನ್ನುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಇದು ವಿವಾದವಾಗುತ್ತಿದ್ದಂತೇ ಇಬ್ಬರೂ ಕಲಾವಿದರು ಸಾಮಾಜಿಕ ಜಾಲತಾಣದ ಮೂಲಕ ವಿಡಿಯೋ ಮಾಡಿ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದಾರೆ. ಬೆಂಗಳೂರಿನ ಶೇ.70 ರಿಂದ 80 ಜನ ತೆಲುಗು ಧಾರವಾಹಿ ನೋಡುತ್ತಾರೆ ಎಂದು ಹೇಳುವುದು ನಮ್ಮ ಉದ್ದೇಶವಾಗಿತ್ತು. ನಾನು ಹುಟ್ಟಿ ಬೆಳೆದಿರುವುದು ಕರ್ನಾಟಕದಲ್ಲೇ. ಆ ಸಂದರ್ಶನವನ್ನು ಸರಿಯಾಗಿ ನೋಡಿದರೆ ನಿಮಗೆ ನಿಜಾಂಶ ತಿಳಿಯುತ್ತದೆ. ಕನ್ನಡವನ್ನು ಕೆಳಗಿಳಿಸುವ ಕೆಲಸ ಯಾವತ್ತೂ ಮಾಡಲ್ಲ.ದುಡ್ಡಿಗೋಸ್ಕರ ಕನ್ನಡವನ್ನು ಮಾರಿದ್ದೇವೆ ಎಂಬ ಆಪಾದನೆ ನಮ್ಮ ಮೇಲೆ ಕೇಳಿಬಂದಿದೆ. ಅಂತಹ ಕೀಳುಮಟ್ಟದ ಕೆಲಸ ಯಾವತ್ತೂ ಮಾಡಲ್ಲ’ ಎಂದು ಚಂದು ಗೌಡ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments