Webdunia - Bharat's app for daily news and videos

Install App

ಪೈಲ್ವಾನ್ ಆಯ್ತು, ಈಗ ಸೈರಾ ಸಿನಿಮಾ ಬಗ್ಗೆ ಕಿಚ್ಚ ಸುದೀಪ್ ಅಭಿಮಾನಿಗಳ ಹೋರಾಟ

Webdunia
ಮಂಗಳವಾರ, 1 ಅಕ್ಟೋಬರ್ 2019 (09:22 IST)
ಬೆಂಗಳೂರು: ಪೈಲ್ವಾನ್ ಪೈರಸಿ ಆದ ವಿಚಾರದಲ್ಲಿ ಕಿಚ್ಚ ಸುದೀಪ್ ಅಭಿಮಾನಿಗಳು ತಮ್ಮ  ಆಕ್ರೋಶ ವ್ಯಕ್ತಪಡಿಸಿದ್ದರಲ್ಲದೆ, ಕಿಚ್ಚನಿಗೆ ಬೆಂಬಲವಾಗಿ ನಿಂತಿದ್ದರು. ಈಗ ಸೈರಾ ನರಸಿಂಹ ರೆಡ್ಡಿ ಸಿನಿಮಾ ವಿಚಾರದಲ್ಲಿ ಕಿಚ್ಚ ಸುದೀಪ್ ಅಭಿಮಾನಿಗಳು ಕನ್ನಡ ಹೋರಾಟ ಮಾಡುತ್ತಿದ್ದಾರೆ.


ತೆಲುಗು ಮೂಲದ ಸೈರಾ ನರಸಿಂಹ ರೆಡ್ಡಿ ಸಿನಿಮಾ ನಾಳೆ ಬಹುಭಾಷೆಗಳಲ್ಲಿ ತೆರೆಕಾಣುತ್ತಿದೆ. ಈ ಸಿನಿಮಾದಲ್ಲಿ ಮೆಗಾಸ್ಟಾರ್ ಚಿರಂಜೀವಿ ನಾಯಕರಾಗಿದ್ದರೆ, ಕಿಚ್ಚ ಸುದೀಪ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾ ಕನ್ನಡಕ್ಕೂ ಡಬ್ ಆಗಿದೆ.

ಹಾಗಿದ್ದರೂ ಕರ್ನಾಟಕದಲ್ಲಿ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳು ಕನ್ನಡಕ್ಕೆ ಡಬ್ ಆದ ಸಿನಿಮಾಗೆ ಕಡಿಮೆ ಪ್ರದರ್ಶನ ನೀಡಿ ತೆಲುಗು ಅವತರಣಿಕೆಗೆ ಹೆಚ್ಚು ಟೈಮ್ ಸ್ಲಾಟ್ ನೀಡಿರುವುದು ಕಿಚ್ಚನ ಅಭಿಮಾನಿಗಳನ್ನು ಕೆರಳಿಸಿದೆ. ಹೀಗಾಗಿ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳ ವಿರುದ್ಧ ಸಿಡಿದೆದ್ದಿರುವ ಕಿಚ್ಚನ  ಅಭಿಮಾನಿಗಳು ಕರ್ನಾಟಕದಲ್ಲಿ ಕನ್ನಡ ಅವತರಣಿಕೆಗೇ ಹೆಚ್ಚಿನ ಪ್ರಾಶಸ್ತ್ಯ ಕೊಡಬೇಕೆಂದು ಆಗ್ರಹಿಸಿ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಶುರು ಮಾಡಿದ್ದಾರೆ. ತೆಲುಗಿನಲ್ಲಿ ಬಿಡುಗಡೆ ಮಾಡಿ ಕನ್ನಡಿಗರಿಗೆ ವಂಚಿಸಬೇಡಿ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments