Select Your Language

Notifications

webdunia
webdunia
webdunia
webdunia

ಕಂಪ್ಯೂಟರ್ ಸುರಕ್ಷಾ ಕೇಂದ್ರಕ್ಕೆ ಗ್ರೀನ್ ಸಿಗ್ನಲ್

ಕಂಪ್ಯೂಟರ್ ಸುರಕ್ಷಾ ಕೇಂದ್ರಕ್ಕೆ ಗ್ರೀನ್ ಸಿಗ್ನಲ್
ಬೆಂಗಳೂರು , ಗುರುವಾರ, 25 ನವೆಂಬರ್ 2021 (15:01 IST)
ರಾಜ್ಯ ಸರ್ಕಾರಿ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಸೇರಿದಂತೆ ಇತರೆ ಸೌಲಭ್ಯ ಪಡೆಯೋದಕ್ಕೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೇರ್ಗಡೆಯಾಗೋದು ಕಡ್ಡಾಯವಾಗಿದೆ. ಈ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಸೇರಿದಂತೆ ಕೆಲ ಆಯ್ದ ಜಿಲ್ಲೆಗಳಲ್ಲಿ ಮಾತ್ರ ಬರೆಯೋದಕ್ಕೆ ಅವಕಾಶ ನೀಡಲಾಗಿತ್ತು.ಇದೀಗ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಹೆಚ್ಚುವರಿಯಾಗಿ ಪರೀಕ್ಷಾ ಕೇಂದ್ರಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ.
 
ಈ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ದಿನಾಂಕ 22-03-2022ರೊಳಗೆ ತೆಗೆದುಕೊಂಡು ಉತ್ತೀರ್ಣರಾಗಬೇಕಾಗಿರುತ್ತದೆ. ಸದರಿ ದಿನಾಂಕದ ನಂತ್ರ CLT ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿ ವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿ ಸೌಲಭ್ಯವನ್ನು ಪಡೆಯಲು ಅನರ್ಹರಾಗಿರುತ್ತಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಳೆಯಿಂದ 3 ದಿನ ರಾಜ್ಯದಲ್ಲಿ ಭಾರೀ ಮಳೆ!