Webdunia - Bharat's app for daily news and videos

Install App

ರಮೇಶ್ ಜಾರಕಿಹೊಳಿ ಸಿ. ಡಿ. ಪ್ರಕರಣದಿಂದ ಅಧಿಕಾರಿಗಳು ರಿಲೀಫ್

Webdunia
ಗುರುವಾರ, 25 ನವೆಂಬರ್ 2021 (17:52 IST)
ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಎಂ.ಎನ್. ಅನುಚೇತ್, ಇನ್ಸ್‌ಪೆಕ್ಟರ್ ಮಾರುತಿ ಬಿ. ವಿರುದ್ಧದ ತನಿಖೆಗೆ ಮಧ್ಯಂತರ ತಡೆ ನೀಡಲಾಗಿದೆ.ರಮೇಶ್ ಜಾರಕಿಹೊಳಿ ಕೇಸ್‌ನ ತನಿಖೆ ಮುಕ್ತಾಯವಾಗಿದೆ. ಅಂತಿಮ ವರದಿ ಸಲ್ಲಿಸಲು ಅನುಮತಿ ಕೋರಲಾಗಿದೆ. ಪೊಲೀಸ್ ಅಧಿಕಾರಿಗಳ ವಿರುದ್ಧದ ತನಿಖೆ ಆದೇಶಕ್ಕೆ ತಡೆ ನೀಡಬೇಕೆಂದು ಹೈಕೋರ್ಟ್‌ಗೆ ಎಸ್‌ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದ್ದರು. ಈ ವಿಚಾರಣೆ ನಡೆಸಿದ ಹೈಕೋರ್ಟ್ 8ನೇ ಎಸಿಎಂಎಂ ಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ದಿನೇಶ್ ಕಲ್ಲಹಳ್ಳಿ ದೂರು ಆಧರಿಸಿ ಕೇಸ್ ದಾಖಲಿಸದ‌ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದಡಿ ಖಾಸಗಿ ದೂರು ದಾಖಲಾಗಿತ್ತು. ಆದರ್ಶ್ ಅಯ್ಯರ್ ಖಾಸಗಿ ದೂರು ಸಲ್ಲಿಸಿದ್ದರು. ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರನ್ನಾಧರಿಸಿ ಎಫ್‍ಐಆರ್ ದಾಖಲಿಸದ ಸಂಬಂಧ ತನಿಖೆ ನಡೆಸಲು ನಗರದ 8ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿ ಮೂವರು ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments