Webdunia - Bharat's app for daily news and videos

Install App

ಸಿಂಹವಾಹನ, ಮುತ್ತಿನ ಚಪ್ಪರ ವಾಹನ ಸಂಭ್ರಮ

Webdunia
WD
ತಿರುಮಲ ಶ್ರೀ ವೆಂಕಟರಮಣ ಸನ್ನಿಧಿಯಲ್ಲಿ ಬ್ರಹ್ಮೋತ್ಸವ ವೈಭವವು ಉತ್ತುಂಗಕ್ಕೇರುತ್ತಿರುವಂತೆಯೇ, ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳ ಸಂಖ್ಯೆಯೂ ಗಣನೀಯವಾಗಿ ಏರುತ್ತಿದೆ.

ಸೋಮವಾರ ಬೆಳಿಗ್ಗೆ 9 ಗಂಟೆಗೆ ಆರಂಭವಾಗಿ ಎರಡು ಗಂಟೆಗಳ ಕಾಲ ನಡೆದ ಸಿಂಹವಾಹನ ಉತ್ಸವವು ಜನಮನ ಸೂರೆಗೊಂಡಿದ್ದು, ಸಾಲಂಕೃತ ದೇವರನ್ನು ಸಿಂಹವಾಹನದಲ್ಲಿ ಕಂಡ ಭಕ್ತರು, ವೆಂಕಟೇಶ ವೈಭವವನ್ನು ಕಂಡು ಪಾವನರಾದರು.

ರಾತ್ರಿ ಉಯ್ಯಾಲೆ ಸೇವೆಯ ಬಳಿಕ ಶ್ರೀ ವೆಂಕಟೇಶ್ವರನು ಮುತ್ತಿನ ಚಪ್ಪರವುಳ್ಳ ವಾಹನದಲ್ಲಿ (ಮುತ್ಯಪುಪಂದಿರಿ) ಕುಳಿತು, ವೈಭವೋಪೇತ ಮೆರವಣಿಗೆಯಲ್ಲಿ ಸಾಗಲಿದ್ದಾನೆ.

ರಾಜಬೀದಿಗಳೆಲ್ಲವೂ ವಿದ್ಯುದ್ದೀಪಗಳಿಂದ ಕಂಗೊಳಿಸುತ್ತಿದ್ದು, ಬಿಗಿ ಪೊಲೀಸ್ ಪಹರೆಯನ್ನು ಕೂಡ ಇದೇ ಸಂದರ್ಭದಲ್ಲಿ ಏರ್ಪಡಿಸಲಾಗಿದೆ.

ನಾಳೆ ಬೆಳಿಗ್ಗೆ ಕಲ್ಪವೃಕ್ಷ ವಾಹನ ಉತ್ಸವ ಹಾಗೂ ಸಂಜೆ ಸರ್ವಭೂಪಾಲ ಉತ್ಸವಗಳು ನಡೆಯಲಿವೆ.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

Show comments