Webdunia - Bharat's app for daily news and videos

Install App

ಕಲ್ಪವೃಕ್ಷವಾಹನೋತ್ಸವದ ವಿಜೃಂಭಣೆ

Webdunia
WD
ತಿರುಪತಿ ತಿರುಮಲ ಬೆಟ್ಟದೊಡೆಯ ಶ್ರೀ ವೆಂಕಟೇಶ್ವರನಿಗೆ ಬ್ರಹ್ಮೋತ್ಸವದ ನಾಲ್ಕನೇ ದಿನವಾದ ಮಂಗಳವಾರ ಬೆಳಿಗ್ಗೆ ದೇವರ ಮೂರ್ತಿಗಳನ್ನು ಕಲ್ಪವೃಕ್ಷ ವಾಹನದಲ್ಲಿ ಕುಳ್ಳಿರಿಸಿ ವೈಭವದ ಮೆರವಣಿಗೆ ನಡೆಯಿತು.

ಬೆಳಿಗ್ಗೆ 9.00 ಗಂಟೆಯಿಂದ ಎರಡು ಗಂಟೆಗಳ ಕಾಲ ನಡೆದ ಮೆರವಣಿಗೆಯಲ್ಲಿ ಸಾವಿರಾರು ಭಕ್ತಾದಿಗಳು ಗೋವಿಂದ ನಾಮಸ್ಮರಣೆಯೊಂದಿಗೆ ಪಾಲ್ಗೊಂಡರು.

ಸಂಜೆ ಉಯ್ಯಾಲೆ ಸೇವೆ ನಡೆದು ಸರ್ವಭೂಪಾಲ ವಾಹನದಲ್ಲಿ ವಿಗ್ರಹದ ಮೆರವಣಿಗೆ ನೋಡಲು ಭಕ್ತರು ಕಾತುರತೆಯಿಂದ ನೆರೆದಿದ್ದಾರೆ.

ಪಾಲನಕರ್ತೃವಾದ ಮಹಾವಿಷ್ಣುವಿಗೆ ಧನ್ಯವಾದ ಸಲ್ಲಿಸುವ ನಿಟ್ಟಿನಲ್ಲಿ ಭೂಮಿಯ ಎಲ್ಲಾ ರಾಜರು (ಭೂಪಾಲರು) ವಾಹನದ ರೂಪ ತಾಳುತ್ತಾರೆ ಎಂಬ ಪ್ರತೀತಿ ಇದೆ. ಉತ್ಸವದ ಬಳಿಕ ಸರ್ವದರ್ಶನ ಸೇವೆ ನಡೆಯಲಿದೆ.

ನಾಳೆ, ಬುಧವಾರ, ಬೆಳಿಗ್ಗೆ ಮೋಹಿನಿ ಅವತಾರೋತ್ಸವ ಹಾಗೂ ಸಂಜೆ ವಿಶ್ವವಿಖ್ಯಾತ ಗರುಡವಾಹನ ಉತ್ಸವವು ವಿಜೃಂಭಣೆಯಿಂದ ಜರುಗಲಿದೆ.

ಶ್ರೀವೆಂಕಟೇಶ್ವರನು ಬ್ರಹ್ಮೋತ್ಸವದ ಅತ್ಯಂತ ಪ್ರಮುಖ ದಿನದಂದು ಪಕ್ಷಿರಾಜ ಗರುಡನನ್ನು ತನ್ನ ವಾಹನವಾಗಿ ಆರಿಸಿಕೊಳ್ಳುತ್ತಾನೆ. ಎಲ್ಲಾ ವಾಹನ ಉತ್ಸವಗಳಲ್ಲಿ ಗರುಡ ವಾಹನೋತ್ಸವವು ಅತ್ಯಂತ ಜನಾಕರ್ಷಣೀಯವಾದುದು ಮತ್ತು ಮಹತ್ತರವೂ ಆದುದು. ಈ ದಿನ ಭಕ್ತಾದಿಗಳ ಸಂಖ್ಯೆ ಸಹಜವಾಗಿಯೇ ಹೆಚ್ಚಿರುತ್ತದೆ.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

Show comments