Webdunia - Bharat's app for daily news and videos

Install App

ಜಂಬೂ ಸವಾರಿಗೆ ಸಜ್ಜಾಗುತ್ತಿದೆ ಮೈಸೂರು

Webdunia
NRB
ಭಾನುವಾರ ಕರ್ನಾಟಕದ ನಾಡ ಹಬ್ಬ ದಸರಾ ಉತ್ಸವಾಚರಣೆಯ ಕಟ್ಟ ಕಡೆಯ ಭಾಗವೂ, ವಿಶ್ವ ವಿಖ್ಯಾತ ಕಾರ್ಯಕ್ರಮವೂ ಆದ ಚಾಮುಂಡೇಶ್ವರಿ ದೇವಿಯ "ಜಂಬೂ ಸವಾರಿ"ಗೆ ಮೈಸೂರಿಗೆ ಮೈಸೂರೇ ಸಜ್ಜುಗೊಂಡಿದೆ.

ಗಜರಾಜ ಬಲರಾಮನು 750 ಕಿಲೋ ತೂಕದ ಚಿನ್ನದ ಅಂಬಾರಿಯಲ್ಲಿ ವಿಜಯದಶಮಿ ದಿನವಾದ ಭಾನುವಾರ ನಾಡದೇವಿ ಚಾಮುಂಡೇಶ್ವರಿಯನ್ನು ಹೊತ್ತು ಗಜಗಾಂಭೀರ್ಯದಿಂದ ಸಾಗುತ್ತಿದ್ದರೆ ದ್ವಾದಶ ಆನೆಗಳ ಪಡೆಯು ಬಲರಾಮನಿಗೆ ಸಾಥಿ ನೀಡಲಿವೆ. ಈ ಅಂದವನ್ನು ನೋಡುವುದೇ ಕಣ್ಣಿಗೆ ಹಬ್ಬ. ಇದಕ್ಕಾಗಿಯೇ ದೇಶ-ವಿದೇಶದಿಂದ ಜನ ಮೈಸೂರಿಗೆ ಆಗಮಿಸುತ್ತಿದ್ದಾರೆ.

ಬಲರಾಮನ ಬೆನ್ನ ಹಿಂದೆ 12 ಆನೆಗಳ ಪಡೆ ಸಾಗುವ ನಿರೀಕ್ಷೆ ಇದೆ. ಅವುಗಳಲ್ಲಿ ಗಜೇಂದ್ರ, ಅರ್ಜುನ, ಅಭಿಮನ್ಯು, ವರಲಕ್ಷ್ಮಿ ಪ್ರಮುಖವಾದುವು. ವಿಜಯದಶಮಿಯಂದು ಭಾನುವಾರ ಬೆಳಿಗ್ಗೆ ರಾಜ್ಯಪಾಲರಾದ ರಾಮೇಶ್ವರ ಠಾಕೂರ್ ನಾಡದೇವಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಜಂಬೂ ಸವಾರಿಗೆ ಚಾಲನೆ ಕೊಡುತ್ತಾರೆ. ಅರಮನೆ ಮೈದಾನದಿಂದ ಬನ್ನಿ ಮಂಟಪದವರೆಗೆ ಜಂಬೂ ಸವಾರಿ ಸಾಗುತ್ತದೆ. ಎಂದಿನಂತೆ ಸಾಯಂಕಾಲ ಬನ್ನಿ ಮಂಟಪದಲ್ಲಿ ಪಂಜಿನ ಕವಾಯತು, ಟಾರ್ಚ್ ಲೈಟ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಈ ಬಾರಿ ಅರಮನೆ ಹೊರಗಿನ ಮೈದಾನದಲ್ಲಿ ಸುಮಾರು 12,000 ಮಂದಿ ಕೂತು ಜಂಬೂ ಸವಾರಿ ವೀಕ್ಷಿಸಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಕಳೆದ ಬಾರಿ ಆಗಿರುವ ನೂಕು ನುಗ್ಗುಲು ಈ ಬಾರಿ ಪುನರಾವರ್ತನೆಯಾಗದಂತೆ ಸಾಕಷ್ಟು ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಹೊರಗಡೆ ರಾಜ್ಯಗಳಿಂದಲೂ ಪೋಲೀಸರನ್ನು ಕರೆತರಲಾಗಿದೆ ಎಂದೂ ಸಹ ಅವರು ಹೇಳಿದ್ದಾರೆ.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

Show comments