Webdunia - Bharat's app for daily news and videos

Install App

ಬಿಜೆಪಿಯೊಳಗೆ ಬಂಡಾಯವಿಲ್ಲ: ಡಿವಿಎಸ್

Webdunia
ಚುನಾವಣಾ ಟಿಕೆಟ್ ಹಂಚಿಕೆ ವಿಚಾರದಿಂದಾಗಿ ಬಿಜೆಪಿಯಲ್ಲಿ ಬಂಡಾಯ ಎದ್ದಿದೆ ಎಂಬುದನ್ನು ಪಕ್ಷದ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದ ಗೌಡ ತಳ್ಳಿಹಾಕಿದ್ದಾರೆ.

ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಮೂಲೆಗುಂಪು ಮಾಡಿ ಪಕ್ಷಕ್ಕೆ ಹೊಸದಾಗಿ ಸೇರಿದವರು ಹಾಗೂ ಹಣದ ಥೈಲಿ ಹೊತ್ತುಬಂದವರಿಗೆ ಚುನಾವಣಾ ಟಿಕೆಟ್ ನೀಡಲಾಗಿದೆ ಎಂಬ ಆಪಾದನೆ ಕೇಳಿಬಂದಿದೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಈಗಾಗಲೇ ಬಿಡುಗಡೆ ಮಾಡಲಾಗಿರುವ 136 ಅಭ್ಯರ್ಥಿಗಳ ಪಟ್ಟಯಲ್ಲಿ 7-8 ಅಭ್ಯರ್ಥಿಗಳಿಗೆ ಸಂಬಂಧಿಸಿ ಸ್ವಲ್ಪಮಟ್ಟಿನ ಗೊಂದಲವಿರಬಹುದು. ಎಲ್ಲ ರಾಜಕೀಯ ಪಕ್ಷಗಳಲ್ಲೂ ಇದು ಸಹಜವೇ. ಆದರೆ ಇದನ್ನೆಲ್ಲಾ ಮೀರಿ ಚುನಾವಣೆಯಲ್ಲಿ ಮುನ್ನುಗ್ಗುವ ಪಡೆ ನಮ್ಮಲ್ಲಿದೆ. ಹೀಗಾಗಿ ಚುನಾವಣೆಗೆ ಈಗಲೇ ಚಾಲನೆ ಸಿಕ್ಕಂತಾಗಿದೆ ಎಂದು ಪ್ರತಿಕ್ರಿಯಿಸಿದರು.

ತುಮಕೂರಿನ ಸಂಸದ ಮಲ್ಲಿಕಾರ್ಜುನಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ತಳೆದಿರುವ ನಿರ್ಧಾರದ ಬಗೆಗೆ ಪ್ರತಿಕ್ರಿಯಿಸುತ್ತಾ, ಮಲ್ಲಿಕಾರ್ಜುನಯ್ಯನವರು ಜನಸಂಘದ ಕಾಲದಿಂದಲೂ ಪಕ್ಷಕ್ಕೆ ದುಡಿಯುತ್ತಾ ಬಂದಿದ್ದಾರೆ. ಪಕ್ಷಕ್ಕೆ ಅವರೊಂದು ಆಸ್ತಿ ಎಂದು ಸದಾನಂದ ಗೌಡ ನುಡಿದರು.

ಕ್ಷೇತ್ರ ಮರುವಿಂಗಡಣೆಯ ಕಾರಣದಿಂದಾಗಿ ಕೆಲವರಿಗೆ ಟಿಕೆಟ್ ಸಿಕ್ಕಿಲ್ಲ. ನೀರೀಕ್ಷೆ ಇಟ್ಟುಕೊಂಡಿದ್ದವರಿಗಿಂತ ಸಮರ್ಥ ಅಭ್ಯರ್ಥಿಗಳು ಸಿಕ್ಕ ಸಂದರ್ಭಗಳಲ್ಲಿ ಸಮರ್ಥರಿಗಷ್ಟೇ ಮಣೆ ಹಾಕಲಾಗಿದೆ. ಹೀಗಾಗಿ ಟಿಕೆಟ್ ವಂಚಿತೆ ಶಕುಂತಲಾ ಶೆಟ್ಟಿಯವರೂ ಸೇರಿದಂತೆ ಯಾರದೂ ಬಂಡಾಯವಲ್ಲ ಎಂದು ಸದಾನಂದ ಗೌಡ ಸ್ಪಷ್ಟಪಡಿಸಿ ಇನ್ನೆರಡು ದಿನಗಳಲ್ಲಿ ಎರಡನೇ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.




ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

Show comments