Webdunia - Bharat's app for daily news and videos

Install App

ಸಾಲಮನ್ನಾ ಐತಿಹಾಸಿಕ ನಿರ್ಧಾರ : ಮೊಯ್ಲಿ

Webdunia
ಜಾತ್ಯಾತೀತ ಪರಂಪರೆಯಿಂದ ಕೂಡಿರುವ ಕಾಂಗ್ರೆಸ್ ಪಕ್ಷ ಮುಂದಿನ ಚುನಾವಣೆಯಲ್ಲಿ ಮತ್ತೆ ಅಧಿಕಾರದ ಗದ್ದುಗೆಯನ್ನು ಏರಲಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಘೋಷಿಸಿದ್ದಾರೆ.

ಇಂದು ನಗರದಲ್ಲಿ ನಡೆದ ಬೃಹತ್ ರೈತ ಸಮಾವೇಶದಲ್ಲಿ ಮಾತನಾಡಿದ ಅವರು, ಸಾಲಮನ್ನಾ ಯೋಜನೆ ಒಂದು ಐತಿಹಾಸಿಕ ನಿರ್ಧಾರವಾಗಿದ್ದು, ವಿದ್ಯುತ್ ಹಾಗೂ ನೀರಾವರಿ ಯೋಜನೆಗಳು ಸೇರಿದಂತೆ ಹಲವು ಯೋಜನೆಯನ್ನು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಕಾರ್ಯರೂಪಕ್ಕೆ ತಂದಿದೆ ಎಂದು ಕೇಂದ್ರ ಸರ್ಕಾರದ ಸಾಧನೆಯನ್ನು ಬಣ್ಣಿಸಿದರು.

ರೈತರ ಆತ್ಮಹತ್ಯೆ ತಡೆಗೆ ವಿದರ್ಭ ಯೋಜನೆಯನ್ನು ಜಾರಿಗೊಳಿಸಲಾಗಿದ್ದಲ್ಲದೆ, ದೇಶದಲ್ಲಿ ಹಸಿರು ಕ್ರಾಂತಿಗೆ ಚಾಲನೆ ನೀಡಿದ್ದೇ ಕಾಂಗ್ರೆಸ್ ಎಂದ ಅವರು, ಕಡು ಬಡವರಿಗೂ ಉನ್ನತ ಶಿಕ್ಷಣದಲ್ಲಿ ಸಿಇಟಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸರ್ಕಾರ ಕೈಗೊಂಡಿರುವ ಯಶಸ್ವಿನಿ ಯೋಜನೆ ದೇಶಕ್ಕೆ ಮಾದರಿಯಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಆರ್ಥಿಕ ಸಬಲತೆಗೆ ಸಕಲ ರೀತಿಯಲ್ಲಿಯೂ ಪ್ರಯತ್ನಿಸುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ರಾಜ್ಯದಲ್ಲಿ ನೀರಾವರಿ ಯೋಜನೆಯನ್ನು ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಮಹತ್ವದ ಪಾತ್ರವಹಿಸಿದ್ದು, ನಶಿಸುತ್ತಿರುವ ಕೆರೆ ಕಟ್ಟೆಗಳ ಅಭಿವೃದ್ದಿಗೆ ಕಾಂಗ್ರೆಸ್ ಹೆಚ್ಚಿನ ಒತ್ತು ನೀಡಿದೆ ಎಂದು ಕಾಂಗ್ರೆಸ್ ಸಾಧನೆಯನ್ನು ಜನತೆಗೆ ತಿಳಿಸಿದರು.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

Show comments