Webdunia - Bharat's app for daily news and videos

Install App

ಬಿಜೆಪಿಯಿಂದ 2ನೇ ಪಟ್ಟಿ ಬಿಡುಗಡೆ: ಭುಗಿಲೆದ್ದ ಭಿನ್ನಮತ

Webdunia
ಸೋಮವಾರ, 14 ಏಪ್ರಿಲ್ 2008 (09:56 IST)
ಪ್ರಮೀಳಾ ನೇಸರ್ಗಿ ಸಹಿತ ಐವರು ಮಹಿಳೆಯರಿರುವ, ಭಾರತೀಯ ಜನತಾ ಪಕ್ಷದ 35 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಭಾನುವಾರ ರಾತ್ರಿ ಬಿಡುಗಡೆ ಮಾಡಲಾಗಿದ್ದು, ಭಿನ್ನಮತದ ಧ್ವನಿ ಭುಗಿಲೆದ್ದಿದೆ.

ಹಾಲಿ ಮೂವರು ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ರಾಜ್ಯಾಧ್ಯಕ್ಷ ಡಿ.ವಿ. ಸದಾನಂದಗೌಡ, ಬಿಜೆಪಿ ಮುಖಂಡರಾದ ಬಿ.ಎಸ್. ಯಡಿಯೂರಪ್ಪ, ಅರುಣ್ ಜೇಟ್ಲಿ ಸೇರಿದಂತೆ ಹಲವು ನಾಯಕರೊಂದಿಗೆ ನಿನ್ನೆ ರಾತ್ರಿ ಪಟ್ಟಿ ಬಿಡುಗಡೆ ಮಾಡಿದ್ದು, ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ರಾಷ್ಟ್ರೀಯ ಚುನಾವಣಾ ಸಮಿತಿಗೆ ಸಲ್ಲಿಸಿದೆ.

ಅರಸೀಕೆರೆಯ ಹಾಲಿ ಶಾಸಕ ಎ.ಎಸ್. ಬಸವರಾಜು, ಸಿಂಧಗಿಯ ಹಾಲಿ ಶಾಸಕ ಅಶೋಕ್ ಶಹಬಾದಿ ಹಾಗೂ ಕನಕಗಿರಿಯ ಹಾಲಿ ಶಾಸಕ ಜಿ. ವೀರಪ್ಪ ಅವರುಗಳು ಟಿಕೆಟ್ ವಂಚಿತರಾಗಿದ್ದಾರೆ. ಆದರೆ, ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಪ್ರೊ. ಮೈಲಾರಪ್ಪನವರಿಗೆ ಟಿಕೆಟ್ ನೀಡಿರುವುದು ಪಕ್ಷದ ಕಾರ್ಯಕರ್ತರಿಗೆ ಅಸಮಾಧಾನ ತಂದಿದೆ.

ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದೇ ತಡ, ಪಕ್ಷದಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ. ಬಂಡಾಯದ ಬಿಸಿ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಕೆಲವು ಬದಲಾವಣೆ ಮಾಡಲು ನಿರ್ಧರಿಸಿದ್ದು, ಕೊನೆಯ ಕ್ಷಣದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇತ್ತೀಚೆಗೆ ಸೇರ್ಪಡೆಗೊಂಡವರಿಗೆ ಹೆಚ್ಚಿನ ಆದ್ಯತೆಯಿಂದ ಟಿಕೆಟ್ ನೀಡಿದ್ದೇ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

Show comments