ಭುಗಿಲೆದ್ದ ಭಿನ್ನಮತ: ಮೆರಾಜ್ ಮನೆಗೆ ಕಲ್ಲು

Webdunia
ಸೋಮವಾರ, 21 ಏಪ್ರಿಲ್ 2008 (18:52 IST)
ಬಂಡಾಯದ ಬಿಸಿ ಜೆಡಿಎಸ್ ಪಕ್ಷವನ್ನೂ ಬಿಟ್ಟಿಲ್ಲ. ಮೊದಲ ಹಂತದ ಚುನಾವಣೆ ನಡೆಯುವ 89 ಕ್ಷೇತ್ರಗಳ ಪೈಕಿ 64 ಮಂದಿ ಅಭ್ಯರ್ಥಿಗಳ ಪಟ್ಟಿಯನ್ನು ವರಿಷ್ಠರು ಆಖೈರುಗೊಳಿಸುತ್ತಿದ್ದಂತೆಯೇ ಭಿನ್ನಮತ ಸ್ಪೋಟಗೊಂಡಿದೆ.

ಬಿ ಫಾರಂ ನೀಡಿಕೆಯಾಗುತ್ತಿದ್ದಂತೆಯೇ ಟಿಕೆಟ್ ವಂಚಿತರು ಪಕ್ಷದ ರಾಜ್ಯಾಧ್ಯಕ್ಷ ಮೆರಾಜುದ್ದೀನ್ ಪಟೇಲ್ ಮನೆಗೆ ಮುತ್ತಿಗೆ ಹಾಕಿ ಬೀಗ ಜಡಿದು ಸುಮಾರು 2 ಗಂಟೆಗಳವರೆಗೂ ಕೂಡಿಹಾಕಿದ ಘಟನೆಯೂ ನಡೆದಿದೆ. ಇದರೊಂದಿಗೆ ಕೆಲವು ಕಾರ್ಯಕರ್ತರು ವಿಷ ಕುಡಿದು ಆತ್ಮಹತ್ಯೆಗೂ ಪ್ರಯತ್ನಿಸಿದ್ದು ರಾಜಕಾರಣ ಸಾಗುತ್ತಿರುವ ದಿಕ್ಕಿಗೆ ಹಿಡಿದ ಕನ್ನಡಿಯಾಗಿದೆ.

ರಾಜರಾಜೇಶ್ವರಿ ನಗರದಿಂದ ಟಿಕೆಟ್ ಬಯಸಿದ್ದ ಎಂ.ವಿ.ವೆಂಕಟೇಶ ಮೂರ್ತಿ ಹಾಗೂ ಮಹಾಲಕ್ಷ್ಮಿಪುರದಿಂದ ಟಿಕೆಟ್ ಬಯಸಿದ್ದ ಟಿ.ವೀರೇಶ್ ಕುಮಾರ್ ಬೆಂಬಲಿಗರು ಜೆಡಿಎಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದೇ ಅಲ್ಲದೇ, ಮೆರಾಜುದ್ದೀನ್ ಪಟೇಲ್ ಮನೆಗೂ ಲಗ್ಗೆಹಾಕಿದರು. ಈ ಸಂದರ್ಭದಲ್ಲಿ ಕೆಲವರು ಅವರ ಮನೆಯ ಮೇಲೆ ಕಲ್ಲು ಹೊಡೆದು ಕಿಟಕಿ ಗಾಜುಗಳನ್ನು ಪುಡಿಗಟ್ಟಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಒಂದು ವೇಳೆ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನಿರಾಕರಿಸುವ ವರಿಷ್ಠರ ಈ ಚಾಳಿ ಮುಂದುವರಿದದ್ದೇ ಆದಲ್ಲಿ ಬಂಡಾಯ ಅಭ್ಯರ್ಥಿಗಳಾಗಿ ನಿಲ್ಲುವ ಇಲ್ಲವೇ ಬೇರೆ ಪಕ್ಷಗಳಿಂದ ಸ್ಪರ್ಧಿಸುವುದಾಗಿ ಕೆಲವರು ಹೇಳಿಕೆ ನೀಡಿದ್ದರೆ, ವರಿಷ್ಠರು ಪಟ್ಟಿ ಬದಲಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮತ್ತೆ ಕೆಲವು ನಿಷ್ಠಾವಂತ ಕಾರ್ಯಕರ್ತರು ಬೆದರಿಕೆ ಹಾಕಿದರು ಎಂದು ತಿಳಿದುಬಂದಿದೆ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

Show comments