ರಾಮನಗರ: ಕುಮಾರಣ್ಣ ನಾಮಪತ್ರ ಸಲ್ಲಿಕೆ

Webdunia
ಸೋಮವಾರ, 21 ಏಪ್ರಿಲ್ 2008 (19:16 IST)
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದು ಈ ಸಂಬಂಧ ನಾಮಪತ್ರ ಸಲ್ಲಿಸಿದ್ದಾರೆ.

ಇಲ್ಲಿನ ಜ್ಯೂನಿಯರ್ ಕಾಲೇಜು ಮೈದಾನದಿಂದ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಹೊರಟು ನಾಮಪತ್ರ ಸಲ್ಲಿಸಿದ ಕುಮಾರಸ್ವಾಮಿಯವರೊಟ್ಟಿಗೆ ಎಚ್.ಸಿ.ಬಾಲಕೃಷ್ಣ ಸೇರಿದಂತೆ ನಗರಸಭೆ ಅಧ್ಯಕ್ಷರು, ಸದಸ್ಯರು, ಸಾವಿರಾರು ಮುಖಂಡರು ಇದ್ದುದು ವಿಶೇಷವಾಗಿತ್ತು.

ಇವರಿಗೆದುರಾಗಿ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಸ್ಪರ್ಧಿಸಲು ಬಯಸಿದ್ದಾರೆ. ಕಾಂಗ್ರೆಸ್ ಬಿಡುಗಡೆ ಮಾಡಿರುವ ಮೊದಲ ಪಟ್ಟಿಯಲ್ಲಿ ಅವರ ಹೆಸರು ಇಲ್ಲವಾದರೂ ಅದು ತಮಗೇ ಒಲಿಯುವುದು ಎಂದು ಅವರು ನಂಬಿದ್ದಾರೆ.

ಸುಮಾರು 35 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸಿರುವ ಲಿಂಗಪ್ಪ ರಾಮನಗರ ವಿಧಾನಸಭಾ ಕ್ಷೇತ್ರವೊಂದರಿಂದಲೇ 3 ಬಾರಿ ಜಯಗಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ತಮ್ಮ ಬೇಡಿಕೆಗೆ ಸ್ಪಂದಿಸಲಿದೆ ಎಂಬುದು ಲಿಂಗಪ್ಪನವರ ನೀರೀಕ್ಷೆ. ಬಿಜೆಪಿ ವತಿಯಿಂದ ಈಗಾಗಲೇ ಎಂ.ರುದ್ರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಜೆಡಿಎಸ್-ಕಾಂಗ್ರೆಸ್ ನಡುವೆ ನೇರ ಹಣಾಹಣಿ ಕಂಡುಬರಲಿದೆ ಎಂದು ಕ್ಷೇತ್ರದ ಜನ ಅಭಿಪ್ರಾಯಪಡುತ್ತಾರೆ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

Show comments