Webdunia - Bharat's app for daily news and videos

Install App

ವೈಜನಾಥ್ ಪಾಟೀಲ್ ಬಿಜೆಪಿಗೆ?

ನಾಯ್ಡು ಜೊತೆ ಮಾತುಕತೆ

Webdunia
ಸೋಮವಾರ, 5 ಮೇ 2008 (19:42 IST)
ಕಾಂಗ್ರೆಸ್‌ನಿಂದ ಟಿಕೆಟ್ ವಂಚಿತರಾಗಿರುವ ಹೈದರಾಬಾದ್-ಕರ್ನಾಟಕದ ಪ್ರಮುಖ ನಾಯಕ ವೈಜನಾಥ್ ಪಾಟೀಲ್ ಬಿಜೆಪಿಗೆ ಸೇರುವುದು ಬಹುತೇಕ ಖಚಿತವಾದಂತಾಗಿದೆ.

ನಗರದ ಖಾಸಗಿ ಹೊಟೇಲ್‌ನಲ್ಲಿ ಇಂದು (ಸೋಮವಾರ) ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ಮುಖಂಡ ವೆಂಕಯ್ಯ ನಾಯ್ಡು ಅವರು ಕಾಂಗ್ರೆಸ್‌ನ ಮುಖಂಡರಾಗಿರುವ ಎಂ.ರಘುಪತಿಯವರನ್ನು ಪಕ್ಷಕ್ಕೆ ಕರೆಸಿಕೊಂಡ ಬಳಿಕ ಮತನಾಡಿದ ನಾಯ್ಡು, ವೈಜನಾಥ್ ಸೇರ್ಪಡೆ ವಿಷಯ ಮಾತುಕತೆಯ ಹಂತದಲ್ಲಿದೆ ಎಂದು ತಿಳಿಸಿದ್ದಾರೆ.

ವೈಜನಾಥ್ ಪಾಟೀಲ್ ಈ ಹಿಂದೆ ಜೆಡಿಎಸ್‌ನಲ್ಲಿದ್ದರು. ಆದರೆ ಆ ಬಳಿಕ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ವಿರುದ್ಧ ತಿರುಗಿ ಬಿದ್ದ ವೈಜನಾಥ್, ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಈಗ ಮತ್ತೆ ಕಾಂಗ್ರೆಸ್‌ನಿಂದ ಟಿಕೆಟ್ ವಂಚಿತರಾಗಿರುವ ಪಾಟೀಲ್ ಬಿಜೆಪಿ ಬಾಗಿಲನ್ನು ತಟ್ಟಿದ್ದಾರೆ.

ಅಲ್ಲದೆ, ಇಂದು ನಡೆದ ಕಾರ್ಯಕ್ರಮದಲ್ಲಿ ರಘುಪತಿ ಬಿಜೆಪಿಗೆ ಸೇರ್ಪಡೆಗೊಂಡರೆ, ಇತ್ತ ಹೊಟೇಲ್‌ನ ಹೊರಭಾಗದಲ್ಲಿ ವೈಜನಾಥ್ ಕಾಣಿಸಿಕೊಂಡಿದ್ದು, ವದಂತಿಗೆ ಇಂಬು ನೀಡಿದಂತಾಗಿದೆ. ಬಿಜೆಪಿ ಮೂಲದ ಪ್ರಕಾರ ಇನ್ನೆರಡು ದಿನಗಳಲ್ಲಿ ವೈಜನಾಥ್ ಪಕ್ಷ ಸೇರುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿವೆ.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

Show comments